ತಿಪಟೂರು:
ನ್ಯಾಯಾಲಯದ ಆವರಣದಲ್ಲಿಯೇ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರು ತನ್ನ ಕಕ್ಷಿದಾರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ತಿಪಟೂರು ನ್ಯಾಯಾಲಯ ಆವರಣದಲ್ಲಿ ಮುನಿಸಿಫ್ ನ್ಯಾಯಾಲಯದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಜಿ. ಎಂಬುವವರು ಕಕ್ಷಿದಾರ ಕೆ ಇ ಬಿ ಇಂಜಿನಿಯರ್ ಗುರುಬಸವಸ್ವಾಮಿ ರವರಿಂದ 20 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.
2015 ರಲ್ಲಿ ವಿದ್ಯುತ್ ಕಂಬ ಬಿದ್ದು ವೃದ್ದೆ ಮೇಲೆ ಬಿದ್ದು ಕಾಲು ತುಂಡಾಗಿತ್ತು. ಈ ಪ್ರಕರಣದ ವಕಾಲತ್ತನ್ನ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮ ವಹಿಸಿಕೊಂಡಿದ್ದರು. ನೆನ್ನೆ ನ್ಯಾಯಾಲಯದಲ್ಲಿ ಈ ಪ್ರಕರಣ ಖುಲಾಸೆಗೊಂಡಿತ್ತು. ಆದ್ದರಿಂದ ಮೇಲ್ಮನವಿ ಸಲ್ಲಿಸದಿರಲು ಪೂರ್ಣಿಮಾ ರವರು ಗುರುಬಸವಸ್ವಾಮಿರವರಿಂದ 40000 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈಗಾಗಲೇ 20 ಸಾವಿರ ಅಕೌಂಟ್ ಮೂಲಕ ಪಡೆದಿದ್ದು, ಬಾಕಿ 20 ಸಾವಿರ ಹಣ ನೇರವಾಗಿ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಎಪಿಪಿ ಕಚೇರಿಯಲ್ಲೇ ನಿನ್ನೆ ರಾತ್ರಿ 10.30 ರವೆರೆಗೆ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಆರೋಪಿ ಪೂರ್ಣಿಮಾ ರವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ