ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಎಸಿಎಫ್ ನಿವಾಸದ ಮೇಲೆ ಎಸಿಬಿ ದಾಳಿ!!

ಮೈಸೂರು :

     ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದು, ಎಸಿಎಫ್ ಶಿವಶಂಕರ್ ಅವರ ಮನೆ ದಾಳಿ ನಡೆಸಿದ್ದಾರೆ.

     ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಆರೋಪದ ಮೇಲೆ ಮೈಸೂರು ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ  ಶಿವಶಂಕರ್ ಅವರಿಗೆ ಸೇರಿದ ಮನೆ ಸೇರಿದಂತೆ ಒಟ್ಟು 5 ಕಡೆ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

     ಮೈಸೂರಿನ ನಜರಾಬಾದ್, ಸರಸ್ವತಿಪುರಂ, ಜೆಸಿ ಬಡಾವಣೆ, ಮಳವಳ್ಳಿ ಸೇರಿದಂತೆ ಒಟ್ಟು ಐದು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap