ಪ್ರಕಾಶ್ ರಾಜ್ ರಾಜಕೀಯ ಪ್ರವೇಶಕ್ಕೆ ಗೌರಿಲಂಕೇಶ್ ಹತ್ಯೆ ಕಾರಣ!

ಬೆಂಗಳೂರು:

      ‘ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನನ್ನನ್ನು ರಾಜಕಾರಣಕ್ಕೆ ಪ್ರವೇಶಿಸುವಂತೆ ಮಾಡಿದೆ ಎಂದು ಬಹುಭಾಷಾ ಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಹೇಳಿದ್ದಾರೆ.

      ನಗರದ ಪ್ರೆಸ್ ಕ್ಲಬ್‍ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ‘ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನನ್ನನ್ನು ರಾಜಕಾರಣಕ್ಕೆ ಪ್ರವೇಶಿಸುವಂತೆ ಮಾಡಿದೆ. ದೇಶ ಮತೀಯ ರಾಜಕಾರಣ ಎದುರಿಸುತ್ತಿದೆ. ಜನರ ಕೋಟ್ಯಂತರ ರೂಪಾಯಿ ತೆರಿಗೆ ಹಣ ಏನಾಗುತ್ತಿದೆ ಎಂಬುದೇ ಗೊತ್ತಿಲ್ಲ’ ಎಂದು ಅವರು ಆತಂಕ ವ್ಯಕ್ತಪಡಿಸಿದರು.

     ನಾನು ಜನರ ದನಿಯಾಗಿ ಇರಲು ಇಷ್ಟ ಪಟ್ಟಿದ್ದೆ. ಆದರೆ ಸಮಾಜದಲ್ಲಿ ಕೆಲವು ಬದಲಾವಣೆ ಮಾಡಬೇಕಾದರೆ ಅಧಿಕಾರ ಬೇಕು. ಅದಕ್ಕಾಗಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಫರ್ಧೆ ಮಾಡುತ್ತೇನೆ ಎಂದಿದ್ದಾರೆ.

     ನನ್ನ ಹುಟ್ಟು, ಬಾಲ್ಯ, ವಿದ್ಯಾಭ್ಯಾಸ ಸೇರಿದಂತೆ ನನ್ನ ಬದುಕಿನ ಬೇರುಗಳೆಲ್ಲಾ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ ಇದ್ದು ಇಲ್ಲಿಂದಲೇ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ’ ಎಂದು ಪ್ರಕಟಿಸಿದರು.

      ‘ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ವಾಸ್ತವ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿದೇ ಹೆಜ್ಜೆ ಇರಿಸುತ್ತಿದ್ದೇನೆ. ಮುಂದಿನ ಹದಿನೈದು ದಿನಗಳಲ್ಲಿ ಜಬರ್ ದಸ್ತ್ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದೇನೆ. ಇದೇ 20ರಿಂದ ಕ್ಷೇತ್ರದಲ್ಲಿ ಅಭಿಯಾನ ಶುರು ಮಾಡಲಿದ್ದೇನೆ’ ಎಂದೂ ಅವರು ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap