ಮುಂದುವರಿದ ಮಳೆ : ಸಂತ್ರಸ್ತರ ರಕ್ಷಣೆಗೆ NDRF​​ ನಿಯೋಜಿಸಿ – ಸಿಎಂ

ಬೆಂಗಳೂರು :

      ಉತ್ತರ ಕರ್ನಾಟಕದ ಭಾಗದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು, ಅಗತ್ಯತೆ ಇರುವ ಪ್ರದೇಶಗಳಲ್ಲಿ ಎನ್ ಡಿಆರ್ ಎಫ್ ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

      ರಾಜ್ಯಾದ್ಯಂತ ಮಳೆ ರಾಯನ ಆರ್ಭಟ ಶುರುವಾಗಿದೆ. ಮತ್ತೆ ಉತ್ತರ ಕರ್ನಾಟಕದ ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ ಭಾಗದಲ್ಲಿ ಧಾರಾಕಾರ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಇನ್ನೂ ಮೂರು ದಿನ ಈ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಳೆ ಆಗುತ್ತಿರುವ ಪ್ರದೇಶಗಳಿಗೆ ತೆರಳಬೇಕು. ಅಲ್ಲಿನ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು. ಕಾಳಜಿ ಕೇಂದ್ರದಲ್ಲಿ ಅಗತ್ಯ ಸೌಕರ್ಯ ಒದಗಿಸಬೇಕು. ಮಳೆಯಿಂದ ಅನಾಹುತಗಳ ತಡೆಗೆ ಕಟ್ಟೆಚ್ಚರ ವಹಿಸಬೇಕು. ಅಗತ್ಯತೆ ಇರುವ ಪ್ರದೇಶಗಳಲ್ಲಿ ಎನ್ ಡಿಆರ್ ಎಫ್ ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

       ಇನ್ನು ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತ ಕ್ರಮವಾಗಿ 15 ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap