ರಾಜ್ಯದ ಪದವಿ, ಡಿಪ್ಲೋಮಾ ಮತ್ತು ಇಂಜಿನಿಯರ್ ಪರೀಕ್ಷೆ ರದ್ದು!!!

ಬೆಂಗಳೂರು :

     ರಾಜ್ಯದಲ್ಲಿನ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಮತ್ತು ಇಂಜಿನಿಯರ್ ಪರೀಕ್ಷೆಯನ್ನು ರದ್ದು ಪಡಿಸಿದೆ. 

     ಇಂದು ಪತ್ರಿಕಾಗೋಷ್ಠಿ ನಡೆಸಿರುವ ಡಿಸಿಎಂ ಅಶ್ವತ್ಥ್‌ ನಾರಾಯಣ್, ರಾಜ್ಯದಲ್ಲಿ ಕೊರೋನಾ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜು ಆರಂಭಿಸುವುದು ಕಷ್ಟವಾಗಿದೆ. ಹೀಗೆ ಇರುವಾಗ ಪರೀಕ್ಷೆ ಕೂಡ ನಡೆಸುವುದು ಕಷ್ಟವಾಗಿದೆ. ಇದೇ ಕಾರಣದಿಂದಾಗಿ ವಿವಿಧ ಶೈಕ್ಷಣಿಕ ತಜ್ಞರ ಅಭಿಪ್ರಾಯದೊಂದಿಗೆ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ರಾಜ್ಯ ಸರ್ಕಾರ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದು ಪಡಿಸುವ ಮೂಲಕ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

      2019-20ನೇ ಸಾಲಿನ ಪದವಿ ಸೇರಿದಂತೆ ಡಿಪ್ಲೋಮಾ, ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮಧ್ಯಂತರ ಸೆಮಿಸ್ಟರ್(Intermediate Semester) ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಪಾಸ್ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಆದ್ರೇ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸೆಪ್ಟಂಬರ್ ನಲ್ಲಿ ಪರೀಕ್ಷೆ ನಡೆಯಲಿದೆ.

      ಇನ್ನೂ ಯುಜಿಸಿ ಮಾರ್ಗ ಸೂಚಿಯ ಅನ್ವಯಂದೆತೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರವೇ ಸೆಪ್ಟಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲಿದೆ. ಇಂತಹ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ವಜೂಬಾಯಿ ವಾಲ ಅವರು ಹಸಿರು ನಿಶಾನೆ ತೋರಿದ್ದಾರೆ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎಸ್ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap