ಬೆಂಗಳೂರು :
ರಾಜ್ಯದಲ್ಲಿ ದಿನೇದಿನೇ ಮಾರಕ ಕೊರೊನಾ ಸೋಂಕು ವ್ಯಾಪಿಸುತ್ತಿದ್ದು, ಜನತೆಯಲ್ಲಿ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಒಂದು ವಾರ ಬಂದ್ ಘೋಷಣೆ ಮಾಡಿದೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ಸಾಧ್ಯವಾದರೆ ಒಂದು ವಾರ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಶಾಲೆ, ಕಾಲೇಜು ಸೇರಿ ಯಾವುದೇ ಕಚೇರಿ ಕೆಲಸಗಳು ಕೂಡ ಇರದು. ಮದುವೆ ಮತ್ತು ಇತರೆ ಸಮಾರಂಭಗಳನ್ನೂ ಮುಂದೂಡಬೇಕು. ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸಂಪೂರ್ಣವಾಗಿ ಬಂದ್ ಆಚರಿಸಲಾಗುತ್ತದೆ. ಉಳಿದಂತೆ ಸರ್ಕಾರಿ ಕಚೇರಿ, ಅಧಿವೇಶನ ಎಂದಿನಂತೆ ನಡೆಯಲಿದೆ ಎಂದರು.
ಇನ್ನು ಅಂತರಾಷ್ಟ್ರೀಯ ವಿಸಾಗಳಿಗೆ ಏಪ್ರಿಲ್ 1 ರವರೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ವಿವರಿಸಿದರು. ಖಾಸಗಿ ಆಸ್ಪತ್ರೆಯವರು ಕಡ್ಡಾಯವಾಗಿ ಸೋಂಕಿತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/12/bs_yeddyurappa__1564162176-e1584095220762.gif)