ಕೊರೊನಾ ಸೋಂಕಿತ ಸಾವು : ಕುಟುಂಬಸ್ಥರಿಂದ ಆಯಂಬುಲೆನ್ಸ್ ಗೆ ಬೆಂಕಿ!!

ಬೆಳಗಾವಿ :

     ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಂಬುಲೆನ್ಸ್ ಗೆ ಬೆಂಕಿ ಹಚ್ಚುವುದರ ಜೊತೆಗೆ ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

      ಬುಧವಾರ ರಾತ್ರಿ 9.15 ಕ್ಕೆ ಈ ಘಟನೆ ಸಂಭವಿಸಿದ್ದು, ಬೆಳಗಾವಿಯ ಬಿಮ್ಸ ಆಸ್ಪತ್ರೆಯ ಕೋವಿಡ್ ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಹಿನ್ನೆಲೆ ಆಕ್ರೋಶಗೊಂಡ ರೋಗಿಯ 10 ಕ್ಕೂ ಹೆಚ್ಚು ಸಂಬಂಧಿಕರು ಬಿಮ್ಸ ಕೋವಿಡ್ ವಾರ್ಡ್ ಮುಂದೆ ನಿಂತಿದ್ದ ಆಯಬುಲೆನ್ಸ್ ಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದಾರೆ. ನೋಡ ನೋಡುತ್ತಿದ್ದಂತೆ ಆಯಬುಲೆನ್ಸ್ ಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಆಂಬುಲೆನ್ಸ್ ಸುಟ್ಟು ಕರಕಲಾಗಿದೆ.

     ಪೊಲೀಸ್ ಸಿಬ್ಬಂದಿ ಭದ್ರತೆ ನಿಯೋಜನೆಯಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು ಆಯಂಬುಲೆನ್ಸ್​ಗೆ ಹತ್ತಿದ್ದ ಬೆಂಕಿಯನ್ನ ಪೊಲೀಸರು ಆರಿಸಿದ್ದಾರೆ. ಗಲಾಟೆ ಆರಂಭವಾದ ತಕ್ಷಣವೇ ಆಯಂಬುಲೆನ್ಸ್​ ನಲ್ಲಿದ್ದ ಚಾಲಕ, ನರ್ಸ್, ಕೊರೊನಾ ಆಸ್ಪತ್ರೆ ಒಳಗೆ ಓಡಿ ಹೋಗಿದ್ದಾರೆ.

      ಅಷ್ಟೇ ಅಲ್ಲದೇ ಐಸಿಯು ವಾರ್ಡ್ ಗೆ ನುಗ್ಗಿ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೂ ಹಲ್ಲೆಗೆ ಯತ್ನಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಪೊಲೀಸ್ ವಾಹನ, ಕಾರುಗಳ ಗಾಜನ್ನು ಪುಡಿ ಪುಡಿ ಮಾಡಿ ತಮ್ಮ ದರ್ಪ ಮೆರೆದಿದ್ದಾರೆ. ಸರಿಯಾಗಿ ಪೊಲೀಸ್ ಸಿಬ್ಬಂದಿ ಭದ್ರತೆ ನಿಯೋಜನೆ ಮಾಡಿದ್ದರಿಂದ ಯಾರ ಮೇಲೆಯೂ ಹಲ್ಲೆ ಆಗಿಲ್ಲ ಎನ್ನಲಾಗುತ್ತಿದೆ.

     ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ಎಸ್.ಪಿ ಲಕ್ಷಣ ನಿಂಬರಗಿ, ನಗರ ಪೊಲೀಸ್ ಆಯುಕ್ತ ಡಾ.‌ಕೆ. ತ್ಯಾಗರಾಜನ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

      ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಬೀಮ್ಸ್ ಮುಂದೆ ಘಟನೆ ಖಂಡಿಸಿ ಕೊರೊನಾ ವಾರಿಯರ್ಸ್ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಯ ಮುಂದೆ ವೈದ್ಯರು, ನರ್ಸ್, ಆಯಾಗಳಿಂದ ಪ್ರತಿಭಟನೆ ನಡೆಯುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap