ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಸ್ವಗ್ರಾಮದಲ್ಲೇ ಇಲ್ಲ ಪ್ರವೇಶ!

ಬೆಳಗಾವಿ :

     ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಸ್ವಗ್ರಾಮದಲ್ಲೇ ಪ್ರವೇಶವಿಲ್ಲ ಎಂಬ ಬ್ಯಾನರ್ ಗಳನ್ನು ಹಾಕಲಾಗಿದೆ.

      ಅಥಣಿಯ ತೆಲಸಂಗ ಗ್ರಾಮದಲ್ಲಿ ಮಹೇಶ್​ ಕುಮಟಳ್ಳಿ ವಿರುದ್ಧ ಬ್ಯಾನರನ್ನು ಹಾಕಲಾಗಿದ್ದು,  ಅಥಣಿ ಶಿವಯೋಗಿಗಳ ಪುಣ್ಯಕ್ಷೇತ್ರವಾಗಿದೆ. ಇದರಲ್ಲಿ ಹಣಕ್ಕಾಗಿ ಶಾಸಕ ಸ್ಥಾನ ಮಾರಿಕೊಂಡವರಿಗೆ ಗ್ರಾಮಕ್ಕೆ ಪ್ರವೇಶವಿಲ್ಲ ಎಂದು ಗ್ರಾಮಸ್ಥರು ಎಚ್ಚರಿಕೆಯನ್ನು ನೀಡಿದ್ದಾರೆ.Image result for mahesh kumathalli

      ಇಂತಹ ಕ್ಷೇತ್ರದ ಶಾಸಕರೊಬ್ಬರು ಹಣಕ್ಕಾಗಿ ಶಾಸಕ ಸ್ಥಾನ ಮಾರಿಕೊಂಡಿದ್ದು, ತಮಗೆ ನೋವು ತಂದಿದೆ. ಇಂತಹ ಕಾರ್ಯ ಮಾಡುವ ಮೂಲಕ ನಮ್ಮ ಗ್ರಾಮಕ್ಕೆ ಮಹೇಶ್ ಕಮಟಳ್ಳಿ ಅಪಮಾನ ಮಾಡಿದ್ದು, ಈ ಹಿನ್ನೆಲೆಯಲ್ಲಿ ಬ್ಯಾನರ್ ನಲ್ಲಿ ಬರೆಯಲಾಗಿದೆ.

     ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸ್ಥಾನ ಕೆಡವಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಅನರ್ಹ ಶಾಸಕರ ಪಾತ್ರ ಅಪಾರ. ಈಗ ಬಿಜೆಪಿಯಿಂದ ಟಿಕೆಟ್​ ಪಡೆದು ಮತ್ತೆ ಜನರೆದುರು ಮತಯಾಚಿಸಲು ಮುಂದಾಗಿದ್ದು, ಅವರ ವಿರುದ್ಧ ಮತದಾರರು ಅಸಮಾಧಾನ ಹೊರ ಹಾಕಿ ತರಾಟೆ ತೆಗೆದುಕೊಳ್ಳುತ್ತಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap