ಬೆಂಗಳೂರು : ಮಾಜಿ ಕಾರ್ಪೋರೇಟರ್ ಪತ್ನಿ ಆತ್ಮಹತ್ಯೆಗೆ ಶರಣು!!

ಬೆಂಗಳೂರು :

    ಕೆ.ಆರ್ ಪುರಂ ಕ್ಷೇತ್ರದ ಬಿಬಿಎಂಪಿ ಮಾಜಿ ಕಾರ್ಪೋರೇಟರ್​ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

     ಬಸವನಪುರ ವಾರ್ಡ್ ಪಾಲಿಕೆ ಮಾಜಿ ಸದಸ್ಯ ಜಯಪ್ರಕಾಶ್ ಅವರ ಪತ್ನಿ ವಿನೋದಾ (30) ಆತ್ಮಹತ್ಯೆ ಮಾಡಿಕೊಂಡಿರುವವರು.

     ವಿನೋದಾ ಅವರು ವೇಲ್‍ನಿಂದ ಫ್ಯಾನ್‍ಗೆ ನೇಣು ಬಿಗಿದುಕೊಂಡಿದ್ದು, ಇದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ಅವರನ್ನು ಭಟ್ಟರಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಯಪ್ರಕಾಶ್ ಮತ್ತು ವಿನೋದಾ ದಂಪತಿಗೆ 3 ವರ್ಷದ ಮಗುವಿದೆ.  

     ವಿನೋದಾ ಅವರು ಇತ್ತೀಚೆಗಷ್ಟೇ ಅಪೆಂಡಿಕ್ಸ್ ಆಪರೇಷನ್ ಮಾಡಿಸಿಕೊಂಡಿದ್ದರು. ಇನ್ನು ಪತ್ನಿಯ ಸಾವಿನ ಸುದ್ಧಿ ಕೇಳಿ ಜಯಪ್ರಕಾಶ್ ಸಹ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.

     ವಿನೋದಾ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕೆ.ಆರ್.ಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ