ಬೆಂಗಳೂರು :
ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಸಿಐಡಿ ಡಿವೈಎಸ್ಪಿ ಆಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ರಮೇಶ್, ಪಿಎಸ್ಐ ಗೌರಿಶಂಕರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಮಾನತುಗೊಂಡ ಅಧಿಕಾರಿಗಳು ಐಎಂಎ ವಂಚನೆ ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ಮಾಡಿಲ್ಲ. ಪ್ರಕರಣದ ಆರೋಪಿ ಮನ್ಸೂರ್ ಪರವಾಗಿ ಕೆಲಸ ಮಾಡಿದ್ದರು ಹಾಗೂ ವಂಚನೆ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂಬ ಆರೋಪವೂ ಈ ಪೊಲೀಸ್ ಅಧಿಕಾರಿಗಳ ಮೇಲೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/09/IMA-Mansoor-khan2-1.gif)