ಬೆಂಗಳೂರು :
ಕಳೆದ ರಾತ್ರಿ ಪಾದರಾಯನಪುರದಲ್ಲಿ ಆರೋಗ್ಯ, ಪೊಲೀಸ್ ಹಾಗೂ ಬಿಬಿಎಂಪಿ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಪ್ರಕರಣ ಕುರಿತಂತೆ ತನಿಖೆ ನಡೆಸಲು, ಇದೀಗ ರಾಜ್ಯ ಸರ್ಕಾರ ಸಿಸಿಬಿಗೆ ಪ್ರಕರಣವನ್ನು ವರ್ಗಾವಣೆ ಮಾಡಿದೆ.
ಈ ಕುರಿತಂತೆ ಮಾಹಿತಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ನಿನ್ನೆ ಪಾದರಾಯನಪುರದಲ್ಲಿ ನಡೆದ ಘಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಪ್ರಕರಣವನ್ನು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಿಸಿಬಿ ತನಿಖೆಗೆ ವರ್ಗಾಯಿಸಿದ್ದಾರೆ. ಸೌಮೇಂದು ಮುಖರ್ಜಿ ನೇತೃತ್ವದ ಸಿಸಿಬಿ ಪೊಲೀಸರ ತಂಡ, ತನಿಖೆಯನ್ನು ನಡೆಸಿ ವರದಿಯನ್ನು ನೀಡಲಿದೆ ಎಂದು ತಿಳಿಸಿದರು.
ಘಟನೆಯ ಬಗ್ಗೆ ಕ್ರಮ ಕೈಗೊಂಡಿದ್ದು, ಈಗಾಗಲೇ 54 ಮಂದಿಯನ್ನು ಬಂಧಿಸಲಾಗಿದೆ. ಇನ್ನು ಹಲವರು ಘಟನೆ ಬಳಿಕ ತಲೆಮರೆಸಿಕೊಂಡಿದ್ದು, ಅವರೆಲ್ಲರ ಪತ್ತೆಗೆ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Bhaskar-rao.gif)