ಬೆಂಗಳೂರು : ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್!!

ಬೆಂಗಳೂರು : 

    ಬೆಳ್ಳಂ ಬೆಳಗ್ಗೆ ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದಿದೆ.

     ಬಂಧಿತ ಆರೋಪಿಗಳನ್ನು ಗೋಪಿ, ಗಂಗಾ, ಅನಂತ, ಬಸವ ಎಂದು ಗುರುತಿಸಲಾಗಿದೆ.

    ಕಳೆದ 3 ದಿನಗಳ ಹಿಂದೆ ನಡೆದಿದ್ದ ವಿನೀತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಠಾಣೆ ಪೊಲೀಸರು ಅವಡದೇವನಹಳ್ಳಿಯಲ್ಲಿ ದಾಳಿ ನಡೆಸಿದ್ದ ವೇಳೆ ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ.

    ಈ ವೇಳೆ ಆರೋಪಿಗಳ ಕಾಲಿಗೆ ಆನೇಕಲ್ ಡಿವೈಎಸ್ಪಿ ಮಹದೇವ್ ಹಾಗೂ ಇನ್ಸ್ ಪೆಕ್ಟರ್ ಕೃಷ್ಣ ಫೈರಿಂಗ್ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಇದೇ ವೇಳೆ ಮುತ್ಯಾನಲ್ಲೂರಿನಲ್ಲಿ ಕೂಡ ಇಬ್ಬರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗೋಪಿ, ಗಂಗಾ, ಅನಂತ, ಬಸವ ಎಂದು ಗುರುತಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link