ಬೆಂಗಳೂರು :
ಪತ್ನಿ ಕಿರುಕುಳದಿಂದ ಬೇಸತ್ತು ಟೆಕ್ಕಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಆಂಧ್ರಪ್ರದೇಶದ ಶ್ರೀನಾದ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 2009 ರಲ್ಲಿ ಶ್ರೀನಾದ್ ಗೆ ರೇಖಾ ಜೊತೆ ಮದುವೆಯಾಗಿದ್ದು, ದಂಪತಿ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಯಾಗಿದ್ದರು. ಲೋನ್ ಮಾಡಿ ಪ್ಲಾಟ್ ಖರೀದಿಸಿದ್ದಾರೆ. ಪ್ರತಿ ತಿಂಗಳು ಅವರು ಲೋನ್ ಕಟ್ಟುತ್ತಿದ್ದರು. ಆದರೆ ಪತ್ನಿ ದುಂದುವೆಚ್ಚ ಮಾಡುತ್ತಿದ್ದರು ಎನ್ನಲಾಗಿದೆ. ಪತ್ನಿಗೆ ದುಂದುವೆಚ್ಚ ಮಾಡದಂತೆ ಬುದ್ಧಿವಾದ ಹೇಳಿದ್ದು ಆಕೆ ಪೋಷಕರಿಗೆ ತಿಳಿಸಿದ್ದಾರೆ.
ಪೋಷಕರು ಮಗಳಿಗೆ ಬುದ್ಧಿವಾದ ಹೇಳುವ ಬದಲು ಗಂಡನ ಆಸ್ತಿಯಲ್ಲಿ ಪಾಲು ಕೇಳುವಂತೆ ತಿಳಿಸಿದ್ದಾರೆ. ಇದರಿಂದ ತಂದೆ-ತಾಯಿಯ ಆಸ್ತಿಯನ್ನು ಪಡೆಯುವಂತೆ ಪತ್ನಿ ಒತ್ತಡ ಹಾಕುತ್ತಿದ್ದರು. ಇಲ್ಲದಿದ್ದರೆ ವಿಚ್ಛೇದನ ನೀಡುತ್ತೇನೆ ಎಂದು ಬೆದರಿಕೆಯನ್ನೂ ಒಡ್ಡಿದ್ದಳು. ಹೀಗಾಗಿ ಇದರಿಂದ ಮಾನಸಿಕವಾಗಿ ನೊಂದಿದ್ದ ಶ್ರೀನಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪತ್ನಿ ಕಿರುಕುಳದಿಂದ ಬೇಸತ್ತು ಶ್ರೀನಾದ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ತಂದೆ ನಾಗೇಶ್ವರರಾವ್ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ