ರಾಜ್ಯದಲ್ಲಿ ಬ್ಯಾಂಕುಗಳ ಕೆಲಸದ ಸಮಯದಲ್ಲಿ ಕಡಿತ!

ಬೆಂಗಳೂರು :

     ರಾಜ್ಯದಲ್ಲಿ ಕರೋನಾ ಏಕಾಏಕಿ ಹೆಚ್ಚುತ್ತಿರುವ ಕಾರಣದಿಂದಾಗಿ ಬ್ಯಾಂಕುಗಳ ಕೆಲಸದ ಸಮಯದಲ್ಲಿ ಬದಲಾವಣೆ ಮತ್ತು ಕೆಲಸದ ಅವಧಿಯನ್ನ ಕಡಿತಗೊಳಿಸಲಾಗಿದೆ.

      ಹೌದು, ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲ ಬ್ಯಾಂಕುಗಳ ವ್ಯವಹಾರಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ನಡೆಯಲಿವೆ.

      ಏಪ್ರಿಲ್ 22 ರಿಂದ ಮೇ. 31 ರವರೆಗೆ ಬ್ಯಾಂಕುಗಳ ವ್ಯವಹಾರಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ. ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಆಡಳಿತಾತ್ಮಕ ಕೆಲಸಗಳು ನಡೆಯುತ್ತಿದ್ದವು. ಆದರೆ, ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಚೇರಿ ಸಿಬ್ಬಂದಿ ಹಾಜರಾತಿಯನ್ನು ಶೇ. 50 ಕ್ಕೆ ಇಳಿಸಿರುವುದರಿಂದ ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link