ಬಿಬಿಎಂಪಿ ಮೇಯರ್-ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ!!!

ಬೆಂಗಳೂರು:

     ಇಂದು ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯಲಿದ್ದು, ಬಿಜೆಪಿ ಮೇಯರ್ ಹಾಗೂ ಉಪಮೇಯರ್ ಅಭ್ಯರ್ಥಿ ಫೈನಲ್ ಆಗಿದೆ.

      ಮೇಯರ್‌ ಸ್ಥಾನಕ್ಕೆ ಬಿಜೆಪಿಯು ಜೋಗುವಾಳ್ಯ ವಾರ್ಡ್‌ನ ಪಾಲಿಕೆ ಸದಸ್ಯ ಎಂ.ಗೌತಮ್ ಕುಮಾರ್‌ ಅವರನ್ನು ಹಾಗೂ ಉಪ ಮೇಯರ್‌ ಅಭ್ಯರ್ಥಿಯನ್ನಾಗಿ ಹೊಸಹಳ್ಳಿ ವಾರ್ಡ್‌ ಸದಸ್ಯೆ ಮಹಾಲಕ್ಷ್ಮೀ ರವೀಂದ್ರ ಅವರನ್ನು ಆಯ್ಕೆ ಮಾಡಿದೆ.

      ಬಿಜೆಪಿಯಲ್ಲಿ ಪದ್ಮನಾಭ ರೆಡ್ಡಿ, ಎಲ್‌.ಶ್ರೀನಿವಾಸ್‌, ಕೆ.ಎ.ಮುನೀಂದ್ರ ಕುಮಾರ್‌, ಜಿ.ಮಂಜುನಾಥ ರಾಜು, ಎಂ.ವೆಂಕಟೇಶ್‌, ಎಂ.ಗೌತಮ್ ಕುಮಾರ್‌, ಕೆ.ಉಮೇಶ ಶೆಟ್ಟಿ ಅವರು ಮೇಯರ್‌ ಸ್ಥಾನದ ಆಕಾಂಕ್ಷಿಗಳಾಗಿದ್ದರು.

       ಈ ಪೈಕಿ ಒಬ್ಬರನ್ನು ಆಯ್ಕೆ ಮಾಡುವ ಸಲುವಾಗಿ ಸೋಮವಾರ ಮಧ್ಯರಾತ್ರಿವರೆಗೂ ಬಿಜೆಪಿ ಮುಖಂಡರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ನೇತೃತ್ವದಲ್ಲಿ ಸಭೆ ನಡೆಸಿದ್ದರು. ಅಂತಿಮವಾಗಿ ಸಂಘ ಪರಿವಾರದ ಹಿನ್ನೆಲೆಯಿಂದ ಬಂದಿದ್ದ ಗೌತಮ್‌ ಕುಮಾರ್‌ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದರು.

      ಕಾಂಗ್ರೆಸ್‌ ಈ ಬಾರಿಯೂ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಿದೆ. ಮೈತ್ರಿಕೂಟದಿಂದ ದತ್ತಾತ್ರೇಯ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಆರ್‌.ಎಸ್‌.ಸತ್ಯನಾರಾಯಣ ಅವರನ್ನು ಮೇಯರ್‌ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಕಾಂಗ್ರೆಸ್‌ ತೀರ್ಮಾನಿಸಿದೆ. ಜೆಡಿಎಸ್‌ನಿಂದ ಶಕ್ತಿಗಣಪತಿ ನಗರ ವಾರ್ಡ್‌ನ ಗಂಗಮ್ಮ ಅವರನ್ನು ಉಪಮೇಯರ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap