ಬೆಂಗಳೂರು : ಕಾಂಗ್ರೆಸ್ ಕಾರ್ಯಕರ್ತ ನೇಣಿಗೆ ಶರಣು!!

ಬೆಂಗಳೂರು:

      ಕಾಂಗ್ರೆಸ್​ ಕಾರ್ಯಕರ್ತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕ ನ್ಯೂಟೌನ್​ ಬಿ ಸೆಕ್ಟರ್​ನಲ್ಲಿ ನಡೆದಿದೆ.

      ವೀರಣ ಗೌಡ(50) ಆತ್ಮಹತ್ಯೆ ಮಾಡಿಕೊಂಡ ಮುಖಂಡ. ವೀರಣ್ಣ ಗೌಡ ಅವರು ಮೂಲತಃ ಹೆಸರುಘಟ್ಟ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 7:30ರ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

      ಹಲವು ವರ್ಷಗಳಿಂದ ಕಾಂಗ್ರೆಸ್​ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ವೀರಣ ಗೌಡ, ರಿಯಲ್​ ಎಸ್ಟೇಟ್​ ಉದ್ಯಮಿಯೂ ಆಗಿದ್ದರು. ವೀರಣ್ಣ ಅವರು ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.

      ಈ ಸಂಬಂಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap