ಬೆಂಗಳೂರು:
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಾಲಕನೋರ್ವ ಸಾವು-ನೋವಿನ ನಡುವೆ ಹೋರಾಟ ನಡೆಸುವಂತಾಗಿದೆ.
ಸ್ನೇಹಿತರೊಂದಿಗೆ ರಸ್ತೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕ ಸಾಯಿ ಚರಣ್ ವಿದ್ಯುತ್ ಕಂಬದಿಂದ ನೆಲದ ಮೇಲೆ ತುಂಡಾಗಿ ಬಿದ್ದಿದ್ದ ತಂತಿಯನ್ನು ತುಳಿದುವಿದ್ಯುತ್ ಶಾಕ್ ಹೊಡೆಸಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾನೆ.
ತಕ್ಷಣವೇ ಬಾಲಕನನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಐಸಿಯು ಅಲ್ಲಿರುವ ಸಾಯಿ ಚರಣ್ 48 ಗಂಟೆಗಳ ಕಾಲ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದು, ಬೆಸ್ಕಾಂ ಇಲಾಖೆಗೆ ನಿರ್ಲಕ್ಷ್ಯದಿಂದಾಗಿ ಪುಟ್ಟ ಬಾಲಕ ಐಸಿಯುನಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಕ್ಯಾಬ್ ಚಾಲಕರಾಗಿರುವ ಬಸವರಾಜ್, ರೇವತಿ ದಂಪತಿ ಹಲವು ವರ್ಷಗಳ ಬಳಿಕ ಸಾಯಿ ಚರಣ್ ಹುಟ್ಟಿದ್ದು, ಮಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅವರ ದುಃಖ ಹೆಚ್ಚಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
