ತುಮಕೂರು:
ಇನ್ನು 6 ತಿಂಗಳಲ್ಲಿ ಲಿಂಗೈಕ್ಯ ಸಿದ್ಧಗಂಗಾ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗೆ ಭಾರತ ರತ್ನ ಪ್ರಶಸ್ತಿ ನೀಡುವುದಾಗಿ ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಬಿಜಿಪಿಯೇತರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಪರೋಕ್ಷವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆದ ಡಾ.ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಶ್ರೀಗಳಿಗೆ ಭಾರತ ರತ್ನ ನೀಡುವ ವಾತಾವರಣವನ್ನ ನಾವುಗಳೇ ನಿರ್ಮಾಣ ಮಾಡುಕೊಳ್ಳುತ್ತಿದ್ದೇವೆ. ಇನ್ನಾರು ತಿಂಗಳಲ್ಲಿ ಶ್ರೀಗಳಿಗೆ ಭಾರತ ರತ್ನ ನೀಡುವ ಅವಕಾಶ ನಮಗೆ ಸಿಗಲಿದೆ ಅನ್ನೋ ಮೂಲಕ ಕೇಂದ್ರದಲ್ಲಿ ಮತ್ತೆ ಯುಪಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಅಭಿಪ್ರಾಯಿಸಿದರು.
ಶ್ರೀಗಳು ನಮಗೆಲ್ಲಾ ದಾರಿದೀಪವಾಗಿದ್ದರು. ಅವರೊಬ್ಬ ಪವಾಡ ಪುರುಷ. ನಡೆದಾಡುವ ದೇವರಾಗಿದ್ದ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಟ್ಟ ನಾನೇ ಪುಣ್ಯವಂತ. ಶ್ರೀಗಳ ಬದುಕು ನಮಗೆ ಆದರ್ಶಪ್ರಾಯವಾಗಬೇಕು. ಶ್ರೀಗಳಿಗೆ ಭಾರತ ರತ್ನ ಸಿಗಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿದೆ. ಮುಂದಿನ ಚುನಾವಣೆಯಲ್ಲಿ ನಮಗೆ ಕೇಂದ್ರದಲ್ಲಿ ಅಧಿಕಾರ ಸಿಕ್ಕರೆ ಶ್ರೀಗಳಿಗೆ ಖಂಡಿತವಾಗಿಯೂ ಭಾರತ ರತ್ನ ಪ್ರಶಸ್ತಿ ಘೋಷಿಸುವುದಾಗಿ ಭರವಸೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/01/Master.gif)