ಹಾಸನ :
ಎಸ್.ಎಸ್.ಎಲ್.ಸಿಯಲ್ಲಿ ಹಾಸನ ಫಸ್ಟ್ ಬರಲು ನನ್ನ ಪತ್ನಿ ಭವಾನಿ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಅವರು ಹೇಳಿಕೆ ನೀಡಿದ್ದಾರೆ.
ಅವರು ಇಂದು ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಶಿಕ್ಷಣ ಸಾಧನೆಗೆ ಮುಖ್ಯ ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳು ಕಾರಣ. ಹಾಸನದ ಶಿಕ್ಷಣದ ಈ ಸಾಧನೆಗೆ ಮುಖ್ಯಮಂತ್ರಿ, ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್, ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರು, ಹಾಗೂ ಶಿಕ್ಷಣ ಸ್ಥಾಯಿ ಸಮೀತಿ ಅಧ್ಯಕ್ಷೆ ಭವಾನಿ ರೇವಣ್ಣನವರು ಕಾರಣ.
ಇದೇ ವೇಳೆ ಅವರು ಭವಾನಿಯವರು ಜಿಲ್ಲಾ ಪಂಚಾಯತಿಯ ಶಿಕ್ಷಣ ಸ್ಥಾಯಿ ಸಮಿತಿಯಲ್ಲಿದ್ದು ಸಾಕಷ್ಟು ಶ್ರಮಪಟ್ಟಿದ್ದಾರೆ ಹೀಗಾಗಿ ನಮ್ಮ ಜಿಲ್ಲೆ ಎಸ್.ಎಸ್.ಎಲ್.ಸಿಯಲ್ಲಿ ಹಾಸನ ಫಸ್ಟ್ ಬರಲು ಅವರು ಕಾರಣ ಎಂದು ಹೇಳಿದ್ದಾರೆ.
ಇನ್ನು ಕಳೆದ ಸಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಹಾಸನ ಏಳನೇ ಸ್ಥಾನ ಪಡೆದುಕೊಂಡಿತ್ತು, ಆದಾದ ಬಳಿಕ ಆಗಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಹೇಗಾದ್ರು ಮಾಡಿ ಎಸ್.ಎಸ್.ಎಲ್.ಸಿಯಲ್ಲಿ ಹಾಸನ ಮೊದಲ ಮೂರು ಸ್ಥಾನವನ್ನು ಪಡೆದುಕೊಳ್ಳುವುದಕ್ಕೆ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತಂದಿದ್ದರು. ಅವರ ಆಗಿನ ಕೆಲಸವೇ ಈಗ ಹಾಸನ ಮೊದಲ ಸ್ಥಾನ ಪಡೆದುಕೊಂಡಿದೆ ಅಂತ ಜಿಲ್ಲೆಯ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ. ಈ ಹೊತ್ತಿನಲ್ಲಿ ಸಚಿವ ಹೆಚ್.ಡಿ ರೇವಣ್ಣ ಅವರ ಮಾತು ಹಾಸ್ಯಾಸ್ಪದ ಎನ್ನುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/05/bhavani-revanna-1524119125.gif)