ಕಾಂಗ್ರೆಸ್ ಗೆ ಬಿಜೆಪಿ ಶಾಸಕ : ಬಿಜೆಪಿಗೆ ಬಿಗ್ ಶಾಕ್!!

ಗದಗ: 

     ಲೋಕಸಭಾ ಚುನಾವಣೆ ವೇಳೆಯಲ್ಲಿಯೇ ಗದಗ ರಾಜಕಾರಣದಲ್ಲಿ ಬಿಗ್ ಶಾಕ್ ಎದುರಾಗಿದೆ.

      ಹೌದು ಗದಗದ ಬಿಜೆಪಿ ಮಾಜಿ ಶಾಸಕ ಹಾಗೂ ಲಿಂಗಾಯಿತ ಸಮಾಜದ ಪ್ರಭಾವಿ ಮುಖಂಡ ಶ್ರೀಶೈಲಪ್ಪ ಬಿದರೂರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.

      ಗದಗದಲ್ಲಿ ಕಾಂಗ್ರೆಸ್ ನಾಯಕರು ರಾತ್ರೋ ರಾತ್ರಿ ನಡೆಸಿದ ಆಪರೇಷನ್ ಹಸ್ತ ಯಶಸ್ವಿಯಾಗಿದ್ದು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಅವರು ಲಿಂಗಾಯಿತ ಸಮಾಜದ ಪ್ರಭಾವಿ ಮುಖಂಡರಾದ ಶ್ರೀಶೈಲಪ್ಪ ಬಿದರೂರ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

      ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಶ್ರೀಶೈಲಪ್ಪ ಬಿದರೂರ ತಟಸ್ಥರಾಗಿ ಉಳಿದಿದ್ದರು. ಅವರನ್ನು ಸಂಪರ್ಕಿಸಿದ ಹೆಚ್.ಕೆ. ಪಾಟೀಲ್ ಪಕ್ಷ ಸೇರುವಂತೆ ಆಹ್ವಾನಿಸಿದ್ದಾರೆ. ಇದಕ್ಕೆ ಶ್ರೀಶೈಲಪ್ಪ ಬಿದರೂರು ಒಪ್ಪಿಕೊಂಡಿದ್ದಾರೆ. ಶೀಘ್ರವೇ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.

      ಶ್ರೀಶೈಲಪ್ಪ ಬಿದರೂರ ಅವರು ಗದಗ ಮತ್ತು ರೋಣ ಕ್ಷೇತ್ರದಲ್ಲಿ ಹಿಡಿತ ಹೊಂದಿದ್ದು, ಅಪಾರ ಅಭಿಮಾನಿ, ಕಾರ್ಯಕರ್ತರನ್ನು ಹೊಂದಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap