ಹುಣಸೂರು:
ಬೈಕ್ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿ, ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ.
ಹುಣಸೂರು ಪಟ್ಟಣದ ಕಲ್ಕುಣಿಕೆ ಗ್ರಾಮದ ಸಂತೋಷ್ ಜಿಂಕೆಗೆ ಡಿಕ್ಕಿ ಹೊಡೆದವ. ಈತ ತಾಲೂಕಿನ ವಿವಿಧ ಪಡಿತರ ಕೇಂದ್ರಗಳಲ್ಲಿ ಕಂಪ್ಯೂಟರ್ ಕೆಲಸ ನಿರ್ವಹಿಸುತ್ತಿದ್ದ. ಭರತವಾಡಿಯ ಪಡಿತರ ಕೇಂದ್ರದಿಂದ ನಗರದ ಕಡೆಗೆ ವಾಪಾಸ್ ಬರುತ್ತಿದ್ದಾಗ ನಾಗಾಪುರ ಬಳಿಯ ಉಡ್ ಲಾಟ್ ಕಡೆಯಿಂದ ಜಿಂಕೆ ಹೊರಬಂದ ವೇಳೆ ಬೈಕ್ನ್ನು ನಿಯಂತ್ರಿಸಲು ಸಾಧ್ಯವಾಗದ ಸಂತೋಷ್ ಅದಕ್ಕೆ ಡಿಕ್ಕಿ ಹೊಡೆದು ನೆಲಕ್ಕುರುಳಿ ಬಿದ್ದಿದ್ದಾನೆ.
ಅಪಘಾತದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಬೈಕ್ ಸವಾರ ಸಂತೋಷ್ ಗೆ ತಲೆಗೆ ತೀವ್ರಪೆಟ್ಟು ಬಿದ್ದಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/10/Deer-accident.jpg)