ಬಳ್ಳಾರಿ : ರಸ್ತೆ ಅಪಘಾತದಲ್ಲಿ ದಂಪತಿಗಳಿಬ್ಬರ ಧಾರುಣ ಸಾವು!!

ಬಳ್ಳಾರಿ :  

     ಕಾರು-ಎರಡು ಬೈಕ್​ಗಳ ನಡುವೆ ಅಪಘಾತ ಸಂಭವಿಸಿದ ದಂಪತಿಗಳಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ.

     ಕುರುಗೋಡು ತಾಲೂಕಿನ ಬ್ಯಾಂಕ್​​ವೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶೇಕ್ ಫಿರೋಜಾ ಹಾಗೂ ಆಕೆಯ ಗಂಡ ಯೂಸೂಫ್ ಮೃತಪಟ್ಟ ದುರ್ದೈವಿಗಳು.

    ಬ್ಯಾಂಕ್​​ನಿಂದ ಸ್ಕೂಟಿಯಲ್ಲಿ ವೇಣಿವೀರಾಪುರ ಕಡೆಯತ್ತ ತೆರಳುತ್ತಿದ್ದ ಈ ಇಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮುಂಬದಿಯ ಬೈಕ್​​ಗೆ ಸ್ಕೂಟಿ ಡಿಕ್ಕಿ ಹೊಡೆದು ಸ್ಕೂಟಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಹಿಂಬದಿಯ ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗದ್ದು, ಕಾರಿನೊಳಗಿದ್ದವರಿಗೂ ಕೂಡ ಗಾಯಗಳಾಗಿವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

      ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ‌ ಈ ಸಂಬಂಧ ಕುಡಿತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap