ವಿಜಯಪುರ:
ಸೇತುವೆ ಮೇಲಿಂದ ಆಯತಪ್ಪಿ ಬಿದ್ದು ಭೀಮಾ ನದಿಯಲ್ಲಿವೃದ್ಧ ನೋರ್ವ ಕೊಚ್ಚಿ ಹೋಗಿರುವ ಘಟನೆ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಭಂಡಾರಕವಟೆ ಸೇತುವೆ ಬಳಿ ನಡೆದಿದೆ.
ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರ ಜಿಲ್ಲೆಯ ಕಂದಲಗಾಂವ ಗ್ರಾಮದ ಶಂಕರ ಕೋಲೆ(65) ಕೊಚ್ಚಿಹೋದ ವೃದ್ಧ.
ಭಂಡಾರಕ ವಟೆ ಬಳಿ ಭೀಮಾ ನದಿಗೆ ಅಡ್ಡಲಾಗಿ ಈ ಸೇತುವೆ ನಿರ್ಮಿಸಲಾಗಿದೆ. ಮಹಾರಾಷ್ಟ್ರದ ನಂದೂರ ಗ್ರಾಮದಿಂದ ಕಂದಲಗಾಂವ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಸೇತುವೆ ದಾಟುವಾಗ ಆಯತಪ್ಪಿ ನದಿಗೆ ಬಿದ್ದಾಗ ಈ ಅವಘಡ ಸಂಭವಿಸಿದೆ.
ಕೊಚ್ಚಿ ಹೋದ ವ್ಯಕ್ತಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಸೇತುವೆಗೆ ತಡೆಗೋಡೆ ಇಲ್ಲದಿರುವುದೇ ಅವಘಡಕ್ಕೆ ಕಾರಣ ಎಂದು ಆರೋಪಿಸಿರುವ ಸುತ್ತಮುತ್ತಲಿನ ಗ್ರಾಮಸ್ಥರು, ತಡೆಗೋಡೆ ನಿರ್ಮಿಸಿಕೊಡುವಂತೆ ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/09/seth.jpg)