ಬೆಳಗಾವಿ:
ವ್ಯಕ್ತಿಯೋರ್ವ ರಸ್ತೆಯಲ್ಲಿ ಸಂಚರಿಸುವಾಗ ಚಿರತೆಯೊಂದು ಏಕಾಏಕಿ ದಾಳಿ ಮಾಡಿದ ಪರಿಣಾಮ ಬೈಕ್ ಸವಾರರು ಮರವೇರಿ ಕುಳಿತಿರುವ ಘಟನೆ ಖಾನಾಪುರ ಬಳಿಯ ಚೋರಲಾ ಘಾಟಿಯಲ್ಲಿ ನಡೆದಿದೆ.
ಬೆಳಗಾವಿ ಮತ್ತು ಗೋವಾ ಮಧ್ಯೆ ಇರುವ ಚೋರಲಾ ಘಾಟಿ ಸುತ್ತಮುತ್ತ ದಟ್ಟವಾದ ಅರಣ್ಯ ಪ್ರದೇಶವಿದೆ. ಹೀಗಾಗಿ ಚಿರತೆ ಈ ಭಾಗದಲ್ಲಿ ಕಾಣಿಸಿಕೊಳ್ಳುತ್ತದೆ. ರಸ್ತೆಯಲ್ಲಿ ಏಕಾಏಕಿ ದಾಳಿ ಮಾಡಿದ ಚಿರತೆಯನ್ನು ಕಂಡು ತಬ್ಬಿಬ್ಬಾದ ಬೈಕ್ ಸವಾರರು, ತಮ್ಮ ವಾಹನಗಳನ್ನು ರಸ್ತೆಯಲ್ಲಿಯೇ ಬಿಟ್ಟು ಪ್ರಾಣ ಉಳಿಕೊಂಡರೆ ಸಾಕು ಅಂತ ಮರಗಳನ್ನು ಹತ್ತಿ ಕುಳಿತಿದ್ದಾರೆ.
ಘಟನಾ ಸ್ಥಳಕ್ಕೆ ಖಾನಾಪುರ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಚಿರತೆ ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಇನ್ನು ಈ ಸುದ್ಧಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ