ಬೆಂಗಳೂರು:
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯಸಭೆಯ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಬಿಜೆಪಿಯ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ಅವರನ್ನು ಅಭಿನಂದಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಮಮೂರ್ತಿಯವರ ಅವಿರೋಧ ಆಯ್ಕೆಯಿಂದ ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಿರುವುದಲ್ಲದೆ ಪಕ್ಷ ಇನ್ನಷ್ಟು ಬಲಿಷ್ಠಗೊಳ್ಳಲು ಪೂರಕವಾಗಲಿದೆ ಎಂದಿದ್ದಾರೆ.
ಅವಿರೋಧ ಆಯ್ಕೆಯ ನಂತರ ಮಾತನಾಡಿದ ಕೆ.ಸಿ.ರಾಮಮೂರ್ತಿ, ಬಿಜೆಪಿ ಪಕ್ಷದ ನಾಯಕರು, ರಾಷ್ಟ್ರೀಯ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ ಅಭಿವೃದ್ಧಿ ಗೆ ಶ್ರಮಿಸುತ್ತೇನೆ. ಮೋದಿ ಅವರ ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಬಿಜೆಪಿಗೆ ಬಂದೆ. ದೇಶಕ್ಕೆ ಇನ್ನಷ್ಟು ಉತ್ತಮ ಕೆಲಸ ಮಾಡುತ್ತೇವೆ ಎಂದರು.
ಡಿಸೆಂಬರ್ 12ರಂದು ರಾಜ್ಯಸಭೆ ಉಪ ಚುನಾವಣೆ ನಡೆಯಬೇಕಾಗಿತ್ತು. ಆದರೆ ಬಿಜೆಪಿಯ ಕೆ.ಸಿ.ರಾಮಮೂರ್ತಿ ಹೊರತುಪಡಿಸಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಕೆ ಸಿ ರಾಮಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಆಯ್ಕೆಯನ್ನು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷ್ಮಿ ಘೋಷಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/12/ramamurthy-rajyasabha.gif)