ವಿಧಾನಪರಿಷತ್ ಚುನಾವಣೆ : ಕಣಕ್ಕಿಳಿಸದಿರಲು ಬಿಜೆಪಿ ನಿರ್ಧಾರ..?!

ಬೆಂಗಳೂರು:

      ಅಕ್ಟೋಬರ್ 4 ರಂದು ವಿಧಾನಪರಿಷತ್ತು ಉಪಚುನಾವಣಾ ನಡೆಯಲಿದ್ದು, ಈ ಚುನಾವಣಾ ಕಣದಿಂದ ಹಿಂದೆ ಸರಿಯಲು ವಿಪಕ್ಷ ಬಿಜೆಪಿ ನಿರ್ಧರಿಸಿದೆ.

     112 ಸಂಖ್ಯಾ ಬಲದ ಅವಶ್ಯಕತೆ ಇದ್ದು, 104 ಸಂಖ್ಯಾ ಬಲ ಹೊಂದಿರುವ ಬಿಜೆಪಿ ಇನ್ನೂ 8 ಸಂಖ್ಯಾ ಬಲದ ಕೊರತೆಯಿಂದಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ತೀರ್ಮಾನಿಸಿದೆ.

      ಈ ವಿಧಾನಪರಿಷತ್ತು ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ, ಎಂ.ಸಿ.ವೇಣುಗೋಪಾಲ್ ಮತ್ತು ನಸೀರ್‍ಅಹಮದ್ ಅವರುಗಳು ಬೆಂಗಳೂರಿನ ವಿಧಾನಸೌಧದ ಒಂದನೇ ಮಹಡಿಯಲ್ಲಿ ಚುನಾವಣಾಧಿಕಾರಿ ಎಂ.ಎಸ್.ಕುಮಾರಸ್ವಾಮಿಗೆ ನಾಮಪತ್ರಗಳನ್ನು ಸಲ್ಲಿಸಿದರು.  

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap