ಬೆಂಗಳೂರು :
ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪತಿ, ಆಗ್ನೇಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ಆದೇಶ ಹೊರಡಿಸಿದ್ದು, ಪಕ್ಷದ ಸೂಚನೆ ಕಡೆಗಣಿಸಿ ಪಕ್ಷಕ್ಕೆ ಮುಜುಗರ ತಂದ ಶ್ರೀನಿವಾಸ್ ರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಉಚ್ಛಾಟನೆ ಮಾಡಲಾಗಿದೆ.
ಶ್ರೀನಿವಾಸ್ ಅವರು ಶಿರಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿದ್ದರು. ಆದರೆ ಬಿಜೆಪಿಯಿಂದ ರಾಜೇಶ್ ಗೌಡರಿಗೆ ಟಿಕೆಟ್ ನೀಡಲಾಗಿದೆ. ನಂತರ ವಿಧಾನಪರಿಷತ್ ಪ್ರವೇಶಿಸಲು ಬಯಸಿದ್ದರು.
ಆದರೆ ಬಿಜೆಪಿಯಿಂದ ಶಿರಾದ ಚಿದಾನಂದ ಗೌಡ ಅವರಿಗೆ ಟಿಕೆಟ್ ನೀಡಲಾಗಿತ್ತು. ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ನಾಮಪತ್ರ ವಾಪಸ್ ಪಡೆಯುವಂತೆ ಶ್ರೀನಿವಾಸ್ ಗೆ, ಡಿಸಿಎಂ ಅಶ್ವಥ್ ನಾರಾಯಣ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಮಾತುಕತೆ ನಡೆಸಿದ್ದರು. ಪಕ್ಷದ ಮುಖಂಡರ ಮಾತಿಗೆ ಮಣೆ ಹಾಕದ ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದರು. ಪಕ್ಷದ ಸೂಚನೆಯನ್ನು ಕಡೆಗಣಿಸಿ, ಮುಜುಗರಕ್ಕೆ ಕಾರಣವಾಗಿರುವ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
