ಬೆಂಗಳೂರು:
ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ‘ರೈತ ಮಹಿಳೆ ಬಗ್ಗೆ ಆಡಿದ ಮಾತಿಗೆ ಕ್ಷಮೆ ಕೇಳಲು ಅವರಿಗೆ ಆಗಲಿಲ್ಲ. ಆದ್ದರಿಂದ ಎಲ್ಲಾ ಸಹೋದರಿಯರಿಗೆ ನಾನು ಕರೆ ನೀಡುತ್ತೇನೆ. ಕುಂತಲ್ಲಿ, ನಿಂತಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಗೆ ಒತ್ತಾಯಿಸಿ. ಅವರು ರಾಜೀನಾಮೆ ನೀಡುವ ತನಕ ಬಿಡಬೇಡಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬುಧವಾರ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದ ಸರ್ಕಾರ ಅಧಿಕಾರದಲ್ಲಿ ಇರಬಾರದು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು.
ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ ಯಡಿಯೂರಪ್ಪ ಅವರು,ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಧಿಕಾರ ನಡೆಸುವ ನೈತಿಕ ಹಕ್ಕು ಇಲ್ಲ. ನಿಮ್ಮನ್ನು ಅಧಿಕಾರದಿಂದ ಮನೆಗೆ ಕಳುಹಿಸುವವರೆಗೂ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
‘ಎಚ್.ಡಿ.ಕುಮಾರಸ್ವಾಮಿ ಅವರಿಗೆ ರೈತರ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿಲ್ಲ ಎಂದಾದರೆ ಅವರು ಅಧಿಕಾರಲ್ಲಿ ಮುಂದುವರೆಯಬಾರದು. ಮುಖ್ಯಮಂತ್ರಿಗಳ ರಾಜೀನಾಮೆ ತನಕ ನಮ್ಮ ಹೋರಾಟ ಮುಂದುವರೆಯಲಿದೆ’ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/10/Kumaraswamy-Worried.gif)