ಯಾದಗಿರಿ :
ಸಿಎಂ ಹೆಚ್.ಡಿ.ಕುಮಾರಸ್ವಾಮಿ ರವರ ಗ್ರಾಮವಾಸ್ತವ್ಯ ಭೇಟಿಗೂ ಮುನ್ನವೇ ಬಿಜೆಪಿ ಪ್ರತಿಭಟನೆಯ ಬಿಸಿ ಮುಟ್ಟಿಸಿದೆ.
ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮಕ್ಕೆ ಸಿಎಂ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದರು. ಈ ವೇಳೆ ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಎಂ ಕುಮಾರಸ್ವಾಮಿ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಮೈತ್ರಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭೀಕರ ಬರಗಾಲ ಬಂದಾಗ ಸಿ ಎಂ ಕುಮಾರಸ್ವಾಮಿ ಜಿಲ್ಲೆಗೆ ಬಾರದೇ ಮಳೆಗಾಲ ಪರಿಸ್ಥಿತಿಯಲ್ಲಿ ಜಿಲ್ಲೆಗೆ ಬಂದು ಏನು ಮಾಡುತ್ತಾರೆ ಎಂದು ಪ್ರಶ್ನಿಸಿ, ಸಾಲ ಮನ್ನಾ ಮಾಡುವಂತೆ ಸಿಎಂಗೆ ಒತ್ತಾಯಿಸಿದರು.
ಹೈದ್ರಾಬಾದ್ ಕರ್ನಾಟಕ ಪ್ರದೇಶದ ರೈತರು ಹಾಗೂ ಈ ಭಾಗದ ಸಮಸ್ಯೆಗಳ ಬಗ್ಗೆ ಸಿಎಂ ಗಮನ ಹರಿಸುತ್ತಿಲ್ಲ. ಹೀಗಾಗಿ ಸಿಎಂ ಗಮನ ಸೆಳೆಯುವ ನಿಟ್ಟಿನಲ್ಲಿ ಯಾನಾಗುಂದಿಯಿಂದ ಚಂಡರಕಿ ಗ್ರಾಮದವರೆಗೆ ಪಾದಯಾತ್ರೆ ನಡೆಸಲಾಯಿತು. ನಂತರ ಜನತಾ ದರ್ಶನ ನಡೆಯುವ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/02/news-7-hdk-kumaraswamy.gif)