ಅನರ್ಹ ಶಾಸಕ ಮುನಿರತ್ನಗೆ ‘ಬಿಜೆಪಿ’ ಟಿಕೆಟ್ ಸಿಗೋದು ಡೌಟ್!?

ಬೆಂಗಳೂರು :

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರ ಪೈಕಿ ಮುನಿರತ್ನಗೆ ಇದೀಗ ಸಂಕಷ್ಟ ಎದುರಾಗಿದ್ದು, ಉಪಚುನಾವಣೆಗೆ ಅನರ್ಹ ಶಾಸಕ ಮುನಿರತ್ನಗೆ ಬಿಜೆಪಿ ಟಿಕಟ್ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿ ಬರುತ್ತಿವೆ.

      ಅನರ್ಹ ಶಾಸಕ ಮುನಿರತ್ನಗೆ ಬಿಜೆಪಿ ಟಿಕೆಟ್ ನೀಡಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮತ್ತು ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್ ಅಡ್ಡ ಪಡಿಸುತ್ತಿದ್ದು, ಸುತಾರಾಂ ಮುನಿರತ್ನ ಅವರು ಬಿಜೆಪಿ ಸೇರ್ಪಡೆ ಬೇಡ ಎಂದು ಇವರಿಬ್ಬರು ಹೇಳುತ್ತಿದ್ದಾರೆ ಎನ್ನಲಾಗಿದೆ.

      ಹೈಕಮಾಂಡ್ ಕೂಡ ಮುನಿರತ್ನ ಹೊರತುಪಡಿಸಿ ಉಳಿದ ಅನರ್ಹ ಶಾಸಕರ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮುನಿರತ್ನ ವಿಚಾರದಲ್ಲಿ ಆರಂಭದಲ್ಲಿ ಆಸಕ್ತಿ ತೋರಿದ್ದ ಆರ್.ಅಶೋಕ್ ಕೂಡ ಸುಮ್ಮನೇ ಇದ್ದಾರೆ. ಯಾವುದೇ ಕಾರಣಕ್ಕೂ ಮುನಿರತ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವುದು ಬೇಡ ಎಂದು ಸಂತೋಷ್​​ ಮತ್ತು ಕಟೀಲ್ ಪಟ್ಟುಹಿಡಿದಿದ್ದಾರೆ.

      ಇನ್ನೊಂದೆಡೆ 2018 ರ ವಿಧಾನಸಭಾ ಚುನಾವಣೆಯಲ್ಲಿ ತನ್ನ ಕ್ಷೇತ್ರವಾದ ರಾಜರಾಜೇಶ್ವರಿ ನಗರದಲ್ಲಿ ಪತ್ತೆಯಾಗಿದ್ದ ನಕಲಿ ವೋಟರ್ ಐಡಿ ಕಾರ್ಡ್ ಗಳ ಪ್ರಕರಣಕ್ಕೂ ಮುಕ್ತಿ ಸಿಕ್ಕಿಲ್ಲ. ಹೀಗಾಗಿ ಮುನಿರತ್ನಗೆ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಸಿಗೋದು ಡೌಟ್ ಎಂದು ಹೇಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap