ಇಬ್ಬರು ಪಿಯು ವಿದ್ಯಾರ್ಥಿಗಳನ್ನು ಬಲಿ ಪಡೆದ ಬಿಎಂಟಿಸಿ ಬಸ್!

ಬೆಂಗಳೂರು: 

         ಪಾರ್ಟ್ ಟೈಂ ಕೆಲಸ ಮಾಡುತ್ತಾ, ಪೇಪರ್ ಹಾಕುತ್ತಾ ವಿದ್ಯಾಭ್ಯಾಸ ಮುಂದುವರೆಸಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಬಿಎಂಟಿಸಿ ಬಸ್ ಬಲಿ ಪಡೆದಿದೆ.

          ವೇಗವಾಗಿ ಬಂದ ಬಿಎಂಟಿಸಿ ಬಸ್ ಹರಿದು ಕಾಲೇಜಿಗೆ ಹೋಗುತ್ತಿದ್ದ ಪಿಯುಸಿ ವಿದ್ಯಾರ್ಥಿಗಳಿಬ್ಬರು ಮೃತಪಟ್ಟರೆ, ಮತ್ತೋರ್ವ ಗಾಯಗೊಂಡಿರುವ ದಾರುಣ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ವರದಿಯಾಗಿದೆ.

           ಕಸ್ತೂರ ಬಾ ನಗರದ ಯದುಕುಮಾರ್ (18) ಹಾಗೂ ಚಂದ್ರಕಾಂತ (17)ಎಂದು ಮೃತಪಟ್ಟ ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ.

           ಅಪಘಾತದಲ್ಲಿ ಗಾಯಗೊಂಡಿರುವ ಮತ್ತೊಬ್ಬ ವಿದ್ಯಾರ್ಥಿ ಬಾಪೂಜಿ ನಗರದ ರಾಜಶೇಖರ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

          ಮೈಸೂರು ರಸ್ತೆಯ ಕೆಬಿ ನಗರದ ಬೆಂಗಳೂರು ಮಹಾನಗರ ಪಾಲಿಕೆಯ ಕಸ್ತೂರಬಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಚಂದ್ರಕಾಂತ್, ದ್ವಿತೀಯ ಪಿಯುಸಿ ಓದುತ್ತಿದ್ದ ಯದುಕುಮಾರ್ ಅವರು ಸ್ನೇಹಿತ ರಾಜಶೇಖರ್ ಜತೆ ಕಾಲೇಜಿಗೆ ಹೋಗಲು ಬೆಳಿಗ್ಗೆ 8.15ರ ವೇಳೆ ಮೈಸೂರು ರಸ್ತೆಯ ಕಸ್ತೂರ ಬಾ ಕಾಲೇಜಿನ ಕ್ರಿಶ್ಚಿಯನ್ ಸ್ಮಶಾನದ ಬಳಿ ರಸ್ತೆ ದಾಟುತ್ತಿದ್ದರು.

           ಈ ವೇಳೆ ದೊಡ್ಡ ಬಸ್ತಿಯಿಂದ ಸಿಟಿ ಮಾರ್ಕೆಟ್ ಕಡೆಗೆ ವೇಗವಾಗಿ ಹೋಗುತ್ತಿದ್ದ ಬಿಎಂಟಿಸಿ ಬಸ್, ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಕಾಂಪೌಂಡ್‍ಗೆ ಗುದ್ದಿದೆ. ಈ ಅಪಘಾತದ ಕಾರಣ ಮೈಸೂರು ರಸ್ತೆಯಲ್ಲಿ 2 ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.

           ಸುದ್ದಿ ತಿಳಿದ ಕೂಡಲೇ ಬ್ಯಾಟರಾಯನಪುರ ಸಂಚಾರ ಪೆÇಲೀಸರು ಧಾವಿಸಿ ಬಸ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಪ್ರಕರಣ ದಾಖಲಿಸಿ ಪರಾರಿಯಾಗಿರುವ ಚಾಲಕನಿಗಾಗಿ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ಸಾರಾ ಫಾತೀಮಾ ತಿಳಿಸಿದ್ದಾರೆ.

            ಅಪಘಾತ ನಡೆಸಿದ ಬಿಎಂಟಿಸಿ ಬಸ್ ಚಾಲಕನನ್ನ ಬ್ಯಾಟರಾಯನಪುರ ಸಂಚಾರ ಪೆÇಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು  ಬ್ರೇಕ್ ವೈಫಲ್ಯದಿಂದ ಅಪಘಾತ ನಡೆದಿದೆ ಎಂದು ಹೇಳಿದ್ದಾನೆ

ಪಾರ್ಟ್ ಟೈಂ ಕೆಲಸ

             ಚಂದ್ರಕಾಂತ್ ಮೂಲತಃ ಕಲಬುರಗಿ ಮೂಲದವನಾಗಿದ್ದು ತಂದೆ ನಿಧನರಾಗಿದ್ದು, ತಾಯಿ ಮನೆ ಕೆಲಸ ಮಾಡಿ ಮಗನನ್ನು ಓದಿಸುತ್ತಿದ್ದರು. ಬೆಳಗ್ಗೆ ಚಂದ್ರಕಾಂತ್ ಕಾಲೇಜಿಗೆ ಹೋಗಿ ಸಂಜೆ ಗೋಪಾಲನ್ ಮಾಲ್ ನಲ್ಲಿ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದ. ಇತ್ತ ಯದುಕುಮಾರ್ ದಿನನಿತ್ಯ ಬೆಳಗ್ಗೆ ಪೇಪರ್ ಹಾಕಿ ನಂತರ ಕಾಲೇಜಿಗೆ ಹೋಗುತ್ತಿದ್ದ. ಯದುಕುಮಾರ್ ಬೆಳಗ್ಗೆ ಕೂಡ ಪೇಪರ್ ಹಾಕಿ ಕಾಲೇಜಿಗೆ ಹೋಗುತ್ತಿದ್ದಾಗ ಬಸ್ ಬಲಿ ಪಡೆದುಕೊಂಡಿದೆ.ಸಂಬಂಧಿಕರ ರೋಧನ ಮುಗಿಲುಮುಟ್ಟಿದೆ

10 ಲಕ್ಷ ಪರಿಹಾರ

               ಅಪಘಾತದಲ್ಲಿ ವಿದ್ಯಾರ್ಥಿಗಳು ಮೃತಪಟ್ಟ ಸ್ಥಳಕ್ಕೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಅವರು ಭೇಟಿ ನೀಡಿ ಮಾಹಿತಿ ಪಡೆದು ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ 10 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap