ಬೆಂಗಳೂರು :
ಆಹಾರ ಉತ್ಪಾದನೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಿಂದ ಇಬ್ಬರು ಸಜೀವದಹನವಾಗಿರುವ ಘಟನೆ ಸೋಮವಾರ ನಡೆದಿದೆ.
ಮಧ್ಯಾಹ್ನ 1:50ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ. ಮನೀಶ್ (21) ಹಾಗೂ ಸೌರವ್ (21) ಮೃತರು.
ಘಟನೆ ವೇಳೆ ಫ್ಯಾಕ್ಟರಿಯಲ್ಲಿ 6 ಜನರು ಕೆಲಸ ಮಾಡುತ್ತಿದ್ದರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ವಿಕ್ಚೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಫೋಟದ ರಭಸಕ್ಕೆ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸಮೀಪವೇ ಇದ್ದ ಶಾಲಾ ಮಕ್ಕಳು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/08/boiler-blastt.jpg)