ಪಾರ್ಕ್ ನಲ್ಲಿ ವಿದ್ಯುತ್ ಸ್ಪರ್ಶ : 7 ವರ್ಷದ ಬಾಲಕ ಸಾವು!!

ಬೆಂಗಳೂರು:

     ಪಾರ್ಕ್‍ನಲ್ಲಿ ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

     ಗ್ರೇಪ್ ಗಾರ್ಡನ್ ನಿವಾಸಿ ನಾಗರಾಜ್-ಗೌರಿ ದಂಪತಿಯ ಪುತ್ರ ಉದಯ್ (7) ಮೃತ ಬಾಲಕ. ನಗರದ ಕುಳ್ಳಪ್ಪ ಸರ್ಕಲ್ ಬಳಿ ಇರುವ ರಾಜ್‌ಕುಮಾರ್ ಪಾರ್ಕ್‌ನಲ್ಲಿ ಈ ದುರ್ಘಟನೆ ನಡೆದಿದೆ.  

      7 ಗಂಟೆ ಸಮಯದಲ್ಲಿ ಪಾರ್ಕ್‍ನಲ್ಲಿ ಆಟವಾಡುತ್ತಿದ್ದಾಗ ಲೈಟಿಂಗ್ ಕಂಬಕ್ಕೆ ಅಳವಡಿಸಲಾಗಿದ್ದ ವೈರ್ ತಗುಲಿ ವಿದ್ಯುತ್ ಹರಿದು ಬಾಲಕ ಸಾವನ್ನಪ್ಪಿದ್ದಾನೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. 

      ಬಿಬಿಎಂಪಿ ಹಾಗು ಬೆಸ್ಕಾಂ ನಿರ್ಲಕ್ಷ್ಯದಿಂದಾಗಿ ಬಾಲಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿರುವ ಸ್ಥಳೀಯ ನಿವಾಸಿಗಳು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಜೊತೆಗೆ ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

      ಸಾರ್ವಜನಿಕರು ನಿತ್ಯ ಓಡಾಡುವ ಪ್ರದೇಶದಲ್ಲಿ ಇಂತಹ ಬೇಜವಾಬ್ದಾರಿ ತೋರಿಸಿದರೆ ಇನ್ನೂ ಎಷ್ಟೋ ಮಂದಿ ಪ್ರಾಣ ಕಳೆದುಕೊಳ್ಳಬೇಕಾದೀತು ಎನ್ನುವ ಆತಂಕದಲ್ಲಿ ಜನರಿದ್ದಾರೆ. ಪಾರ್ಕ್ ನ್ನು ಸರಿಯಾಗಿ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap