ವಿಜಯಪುರ :
ಗೃಹ ಸಚಿವ ಎಂ.ಬಿ.ಪಾಟೀಲ್ ತವರು ಕ್ಷೇತ್ರದಲ್ಲಿ ಕುಡಿಯುವ ನೀರು ಪೂರೈಸದಿದ್ದರೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಅತಾಲಟ್ಟಿ ಗ್ರಾಮದಲ್ಲಿ ಮಹಿಳೆಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಕುಡಿಯುವ ನೀರು ಪೂರೈಕೆ ಮಾಡದಿದ್ದರೆ ಮತದಾನ ಬಹಿಷ್ಕಾರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಅತಾಲಟ್ಟಿಯಲ್ಲಿ ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಮಹಿಳೆಯರು ಪ್ರತಿಭಟನೆ ನಡೆಸಿದ್ದು, ಕೃಷ್ಣಾ ನದಿಯಿಂದ ಪೈಪ್ ಲೈನ್ ಮೂಲಕ ಕುಡಿಯುವ ನೀರು ಪೂರೈಸಲು ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/mbpatil2-kuxD-621x414@Live.gif)