ಮಂಡ್ಯ:
ನಡು ರಸ್ತೆಯಲ್ಲೇ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ನಡೆದಿದೆ.
ಮೆಳ್ಳಹಳ್ಳಿಯ ನವೀನ್ ಅಲಿಯಾಸ್ ಕುಟ್ಟಿ (30) ಮೃತಪಟ್ಟ ಯುವಕ. ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಸಾರ್ವಜನಿಕರ ಎದುರೇ ಈತನ ಮೇಲೆ ಹಲ್ಲೆ ನಡೆಸಿದ ಮೂವರು ಯುವಕರ ಗುಂಪು ನಡುರಸ್ತೆಯಲ್ಲಿ ನವೀನ್ನನ್ನು ಅಟ್ಟಾಡಿಸಿ ಲಾಂಗ್-ಚಾಕುವಿನಿಂದ ಚುಚ್ಚಿದ್ದಾರೆ.
ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ನವೀನ್ನನ್ನು ಕೆ.ಎಂ.ದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನವೀನ್ ಸಾವನ್ನಪ್ಪಿದ್ದಾನೆ.
ಹಳೇ ವೈಷಮ್ಯ ಹಿನ್ನಲೆಯಲ್ಲಿ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ