‘ಮುನಿರತ್ನಗೆ ಮಂತ್ರಿ ಸ್ಥಾನ ಖಚಿತ’ ಎಂದ ಸಿಎಂ ಬಿಎಸ್​ವೈ!!

ಬೆಂಗಳೂರು :

     ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಅವರಿಗೆ ಸಚಿವ ಸ್ಥಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

     ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ , ಮುನಿರತ್ನ ಕೊರೊನಾ ಸಂದರ್ಭದಲ್ಲಿ ಚೆನ್ನಾಗಿ ಕೆಲಸ ಮಾಡಿದ್ದು, 40 ಸಾವಿರ ಅಂತರದಿಂದ ಮುನಿರತ್ನ ಗೆಲ್ಲುತ್ತಾರೆ ಎಂಬ ನಿರೀಕ್ಷೆಯಿದೆ. ಮತದಾರರು ಹೆಚ್ಚು ಮತದಾನ ಮಾಡುವ ಮೂಲಕ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ. ಸಂಪುಟ ವಿಸ್ತರಣೆಯಲ್ಲಿ ಮುನಿರತ್ನಗೆ ಮಂತ್ರಿ ಸ್ಥಾನ ನಿಶ್ಚಿತವಾಗಿ ಕೊಡುತ್ತೇವೆ ಎಂದರು.

      ಇನ್ನು ಬಹಳ ದಿನಗಳಿಂದ ನಿಂತು ಹೋಗಿರುವ ಸಂಪುಟ ವಿಸ್ತರಣೆ ಮಾಡುತ್ತೇವೆ. ನಾನು ದೆಹಲಿ ಹೋಗಿ ಬರುತ್ತೇನೆ. ಕ್ಯಾಬಿನೆಟ್ ವಿಸ್ತರಣೆ ಅಥವಾ ಪುನಾರಚನೆ ಏನು ಬೇಕಾದ್ರೂ ಆಗಬಹುದು.  ಮುಂದೆ ಎದುರಾಗುವ ಸಾರ್ವತ್ರಿಕ ವಿಧಾನಸಭಾ 150 ಸ್ಥಾನ ಗೆಲ್ಲುತ್ತೇವೆ. ಬರುವ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿಗೆ ಹಿನ್ನಡೆಯಾಗಬಾರದು. ನಾನು ಅಧಿವೇಶನದಲ್ಲಿ ಮಾತನಾಡುವಾಗ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಬಿಜೆಪಿ ಯಾವ ಚುನಾವಣೆಯನ್ನು ಗೆಲ್ಲದೇ ಬಿಡುವುದಿಲ್ಲ ಎಂದಿದ್ದಾರೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap