ಬೆಂಗಳೂರು:
ಸಿಎಂ ಬಿ. ಎಸ್. ಯಡಿಯೂರಪ್ಪ ನಿನ್ನೆ ತಮ್ಮ ಅಧಿಕೃತ ನಿವಾಸದಲ್ಲಿ ಕರುಗಳ ಜೊತೆ ಅವರು ಕೆಲ ಸಮಯವನ್ನು ಕಳೆದ ಫೋಟೊ ನೆಟ್ಟಿಗರ ಮನಗೆದ್ದಿದೆ.
ನನ್ನ ದಿನಚರಿ ಪ್ರಾರಂಭವಾಗುವುದೇ ಬೆಳಗಿನ ನಡಿಗೆ ಮೂಲಕ ಮತ್ತು ಆ ಸಮಯದಲ್ಲಿ ಎದುರಾಗುವ ಮುದ್ದಿನ ಕರುಗಳಾದ ನಂದೀಶ ಮತ್ತು ಬಸವನ ಮೈತಡವದೆ ಅದು ಪೂರ್ಣವಾಗದು. ಮೂಕ ಪ್ರಾಣಿಗಳ ಪ್ರೀತಿ, ಅಕ್ಕರೆಗಳ ಅಭಿವ್ಯಕ್ತಿ ಹೃದಯ ಮುಟ್ಟುತ್ತದೆ.
Posted by BS Yediyurappa on Sunday, August 16, 2020
ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಯಡಿಯೂರಪ್ಪನವರು ವಾಪಸ್ಸಾಗಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದ ಕಾರಣ ಆಗಸ್ಟ್ 2 ರಿಂದ ಇಂದಿನವರೆಗೆ ಕರುಗಳ ಜೊತೆ ಕಾಲ ಕಳೆಯಲು ಸಾಧ್ಯವಾಗಿರಲಿಲ್ಲ.
ನಿನ್ನೆ ಭಾನುವಾರ ರಿಲ್ಯಾಕ್ಸ್ ಮೂಡ್ನಲ್ಲಿದ್ದ ಅವರು ಕರುಗಳ ಜೊತೆ ಕೆಲ ಸಮಯ ಕಳೆದರು. ಆ ಸಂತಸದ ಕ್ಷಣಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.
ಯಡಿಯೂರಪ್ಪ ಅವರಿಗೆ ಹಸು, ಕರುಗಳೆಂದರೆ ಪ್ರೀತಿ. ಅದಕ್ಕಾಗಿಯೇ ತಮ್ಮ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ಉಡುಗೊರೆಯಾಗಿ ನೀಡಿದ್ದ ಗಿರ್ ತಳಿಯ ಹಸುಗಳನ್ನು ಸ್ವೀಕರಿಸಿ ಸರ್ಕಾರಿ ನಿವಾಸ ಕಾವೇರಿಯ ಆವರಣದಲ್ಲಿಯೇ ಸಾಕುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
