ಬೆಂಗಳೂರು :
ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸೋಲಿನ ಭಯದಿಂದ ನಟರಿಗೆ ಕಳ್ಳ ಜೋಡಿ ಎತ್ತು ಎಂದು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಬೆಂಬಲಕ್ಕೆ ನಿಂತಿರುವ ನಟ ದರ್ಶನ್ ಹಾಗೂ ಯಶ್ ರನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಳ್ಳ ಜೊಡೆತ್ತು ಎಂದು ಕರೆದಿದ್ದರು. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಎಸ್ ವೈ, ಸೋಲಿನ ಭಯದಿಂದ ಸಿಎಂ ಹೆಚ್.ಡಿಕೆ ಅವರು ಈ ರೀತಿ ಹೇಳಿದ್ದಾರೆ ಎಂದರು.
ಇದೇ ವೇಳೆ, ಸಂಗಣ್ಣ ಕರಡಿಗೆ ಟಿಕೆಟ್ ನೀಡುವ ವಿಚಾರವಾಗಿ ಮಾತನಾಡಿದ ಬಿಎಸ್ವೈ, ಅವರಿಗೆ ಯಾವುದೇ ತೊಂದರೆ ಆಗಲಿಕ್ಕಿಲ್ಲ ಅಂದುಕೊಂಡಿದ್ದೇವೆ. ಕರಡಿ ಸಂಗಣ್ಣ ಈಗಾಗಲೇ ಕೊಪ್ಪಳ ಕ್ಷೇತ್ರದ ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಟಿಕೆಟ್ ಸಿಗುತ್ತದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/yeddyurappa-kumaraswamy.gif)