ಹೆಚ್ಡಿಕೆ ಗೆ ಮಂಡ್ಯದಲ್ಲಿ ಸೋಲಿನ ಭಯ – ಬಿಎಸ್ ವೈ

ಬೆಂಗಳೂರು :

      ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸೋಲಿನ ಭಯದಿಂದ ನಟರಿಗೆ ಕಳ್ಳ ಜೋಡಿ ಎತ್ತು ಎಂದು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

ದರ್ಶನ್-ಯಶ್ ಜೋಡೆತ್ತುಗಳಲ್ಲ ಕಳ್ಳೆತ್ತುಗಳು : ಸಿಎಂ ಕುಮಾರಸ್ವಾಮಿ!!

      ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಬೆಂಬಲಕ್ಕೆ ನಿಂತಿರುವ ನಟ ದರ್ಶನ್ ಹಾಗೂ ಯಶ್ ರನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಳ್ಳ ಜೊಡೆತ್ತು ಎಂದು ಕರೆದಿದ್ದರು. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಎಸ್ ವೈ, ಸೋಲಿನ ಭಯದಿಂದ ಸಿಎಂ ಹೆಚ್.ಡಿಕೆ ಅವರು ಈ ರೀತಿ ಹೇಳಿದ್ದಾರೆ ಎಂದರು.

      ಇದೇ ವೇಳೆ, ಸಂಗಣ್ಣ ಕರಡಿಗೆ ಟಿಕೆಟ್ ನೀಡುವ ವಿಚಾರವಾಗಿ ಮಾತನಾಡಿದ ಬಿಎಸ್​ವೈ, ಅವರಿಗೆ ಯಾವುದೇ ತೊಂದರೆ ಆಗಲಿಕ್ಕಿಲ್ಲ ಅಂದುಕೊಂಡಿದ್ದೇವೆ. ಕರಡಿ ಸಂಗಣ್ಣ ಈಗಾಗಲೇ ಕೊಪ್ಪಳ ಕ್ಷೇತ್ರದ ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಟಿಕೆಟ್ ಸಿಗುತ್ತದೆ ಎಂದು ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap