‘ಮುಂದಿನ ಬಾರಿಯೂ ಸಿದ್ದರಾಮಯ್ಯ ವಿಪಕ್ಷದಲ್ಲೇ ಇರುತ್ತಾರೆ’ – ಬಿಎಸ್ವೈ

ಬೆಂಗಳೂರು:

     ‘ಸಿದ್ದರಾಮಯ್ಯ ಮುಂದಿನ ಬಾರಿಯೂ ವಿಪಕ್ಷದಲ್ಲಿರುತ್ತಾರೆ, ಅವರನ್ನು ಅಲ್ಲೇ ಕೂರಿಸದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ’ ಸವಾಲು ಹಾಕಿದ್ದಾರೆ.

    ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೆಶಿಸಿ ಮಾತನಾಡಿದ ಸಿಎಂ, ‘ಸಂಕಷ್ಟ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವವ್ಯಾಪಿ ಬಜೆಟ್ ಇದಾಗಿದೆ ಎಂದರು.

     ಇದೇ ವೇಳೆ ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಸದಸ್ಯರು ವಿಪಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ, ಯಡಿಯೂರಪ್ಪ ಅವರಿಗೆ ಬಜೆಟ್ ಮಂಡಿಸುವ ನೈತಿಕತೆ ಇಲ್ಲ ಎಂದು ಪ್ರತಿಭಟಿಸಿ ಸಭಾತ್ಯಾಗ ಮಾಡಿದ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, “ಕಾಂಗ್ರೆಸ್ ನವರ ನೈತೈಕತೆ ಅವರ ತಲೆ, ನಾಳೆ ಅವರ ನೈತಿಕತೆ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.

    ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧವೂ ಗುಡುಗಿದ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಮುಂದಿನ ಬಾರಿಯೂ ವಿಪಕ್ಷದಲ್ಲಿರುತ್ತಾರೆ, ಅವರನ್ನು ವಿಪಕ್ಷದಲ್ಲೇ ಕೂರಿಸದಿದ್ದರೆ ನಾನ ಯಡಿಯೂರಪ್ಪನೇ ಅಲ್ಲ, ಮುಂದಿನ ಚುನಾವಣೆಯಲ್ಲಿ ನಾವು 130 ರಿಂದ 135 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap