‘ಬೈ ಎಲೆಕ್ಷನ್‌ನಲ್ಲಿ ಗೆದ್ದವರಿಗೆ ಮಂತ್ರಿ ಭಾಗ್ಯ’ – ಸಿಎಂ!!

ಬೆಳಗಾವಿ:

     ಉಪ ಚುನಾವಣೆಯಲ್ಲಿ ಗೆದ್ದು ಬರುವ ಎಲ್ಲ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

      ಕಾಗವಾಡ‌ ಕ್ಷೇತ್ರದ ಶಿರಗುಪ್ಪಿಯಲ್ಲಿ ಶನಿವಾರ‌ ನಡೆದ ಬಿಜೆಪಿ ಸಮಾವೇಶಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರು ರಾಜೀನಾಮೆ‌ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಆಗಿದ್ದೇನೆ.‌ ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದು. ಅವರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು.‌ ಶಾಸಕರ ಕ್ಷೇತ್ರಗಳಲ್ಲಿ ಚುನಾವಣೆ ಇದ್ದು, ಗೆದ್ದು ಬರುವ ಎಲ್ಲ ಶಾಸಕರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ತಿಳಿಸಿದರು.

      ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆ ಆಗಲಿದ್ದಾರೆ ಎಂಬ ವಿಶ್ವಾಸ ಇದೆ. ಮೊದಲನೇ‌ ಹಂತದ ಪ್ರಚಾರ ಬಳಿಕ ಎರಡನೇ ಹಂತದಲ್ಲಿ ಮತ್ತೆ ಬೆಳಗಾವಿ ಜಿಲ್ಲೆಗೆ ಆಗಮಿಸಲಾಗುವುದು ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap