ಬಿಎಸ್ವೈ ಪ್ರಮಾಣವಚನಕ್ಕೆ ಸಿದ್ದು, ಹೆಚ್ಡಿಕೆ ಗೆ ವಿಶೇಷ ಆಹ್ವಾನ!!

ಬೆಂಗಳೂರು:

      ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಲಿರುವ ಯಡಿಯೂರಪ್ಪ ಅವರು ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ರವರಿಗೆ ಪ್ರಮಾಣವಚನಕ್ಕೆ ಬರಲು ಆಹ್ವಾನ ನೀಡಿದ್ದಾರೆ.

       ಕಾಂಗ್ರೆಸ್, ಜೆಡಿಎಸ್ ಪಕ್ಷದ ಎಲ್ಲಾ ಶಾಸಕರಿಗೂ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿದ ಬಿ.ಎಸ್. ಯಡಿಯೂರಪ್ಪ,  ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರಿಗೆ ವಿಶೇಷವಾಗಿ ಆಹ್ವಾನಿಸುತ್ತಿದ್ದೇನೆ. ಈ ಬಗ್ಗೆ ಪತ್ರವನ್ನೂ ಬರೆಯುತ್ತೇನೆ ಮತ್ತು ದೂರವಾಣಿ ಮೂಲಕ ಸಂಪರ್ಕಿಸಿ ಪ್ರಮಾಣವಚನ ಸಮಾರಂಭಕ್ಕೆ ಬಂದು ಸಹಕರಿಸುವಂತೆ ಕೋರುತ್ತೇನೆ ಎಂದರು.

      ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇಂದು ಸಂಜೆ  6 ರಿಂದ 6:15 ರೊಳಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಸಲು ರಾಜ್ಯಪಾಲ ವಾಜುಬಾಯಿ ವಾಲಾ ಅನುಮತಿ ನೀಡಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap