ಸಚಿವ ಸ್ಥಾನ ಹಂಚಿಕೆಯಲ್ಲಿ ಅಮಿತ್ ಶಾ ನಿರ್ಣಯವೇ ಅಂತಿಮ!!

ರಾಯಚೂರು :

       ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನಿರ್ಣಯವೇ ಅಂತಿಮ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

       ದೇವದುರ್ಗ ತಾಲೂಕಿನ ತಿಂಥಿಣಿ ಬಳಿ ಹಮ್ಮಿಕೊಂಡಿರುವ ಹಾಲುಮತ ಸಂಸ್ಕೃತಿ ವೈಭವದ ನಿಮಿತ್ತ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ಯಾರೋ ಹೇಳಿದರು ಅಂತ ಯಾರಿಗೆ ಬೇಕು ಅವರಿಗೆ ಸಚಿವ ಸ್ಥಾನ ನೀಡಲಾಗದು. ಅದನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿರ್ಧರಿಸುತ್ತಾರೆ. ಅವರ ನಿರ್ಣಯವೇ ಅಂತಿಮ ಎಂದು ತಿಳಿಸಿದ್ದಾರೆ.

    ವಿದೇಶ ಪ್ರವಾಸಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡುವ ಉದ್ದೇಶವಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಅಮಿತ್ ಶಾ ಅವರು ಭೇಟಿಗೆ ಅವಕಾಶ ನೀಡಿದರೆ ಇಂದು ಸಂಜೆಯೇ ದೆಹಲಿಗೆ ತೆರಳುವೆ, ಸಾಧ್ಯವಾದಷ್ಟು ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು. ಇಂದು ಅಮಿತ್ ಶಾ ಭೇಟಿಗೆ ಅವಕಾಶ ಸಿಗದಿದ್ದರೆ ನಾಳೆ ಭೇಟಿ ಮಾಡಿ ಚರ್ಚೆ ನಡೆಸುವೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link