ಮನೆಯ ಛಾವಣಿ ಮೇಲೆ ಉರುಳಿ ಬಿದ್ದ ಸರ್ಕಾರಿ ಬಸ್!!

ಈಶ್ವರಮಂಗಲ: 

      ಸರಕಾರಿ ಬಸ್ಸೊಂದು ಚಾಲಕ ನಿಯಂತ್ರಣ ತಪ್ಪಿ ಮನೆಯೊಂದರ ಮೇಲ್ಚಾವಣಿ ಮೇಲೆ ಬಿದ್ದ ಘಟನೆ ಈಶ್ವರಮಂಗಲದ ಸಮೀಪ ಸಾಂತ್ಯ ಎಂಬಲ್ಲಿ ನಡೆದಿದೆ.

    ಈಶ್ವರಮಂಗಲದ ಸಾಂತ್ಯ ಎಂಬಲ್ಲಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಪುತ್ತೂರಿನಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಸುಮಾರು 20 ಅಡಿಯಷ್ಟು ಕೆಳಗಿರುವ ಮನೆಯ ಕೊಟ್ಟಿಗೆಯ ಛಾವಣಿಯ ಮೇಲೆ ಸರಕಾರಿ ಬಸ್ ಉರುಳಿ ಬಿದ್ದಿದೆ.

    ಬಸ್ ಉರುಳಿ ಬಿದ್ದ ಜಾಗದಲ್ಲಿ ಮನೆಮಂದಿ ಯಾರೂ ಇರದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.

     ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಅಲ್ಪ ಸ್ವಲ್ಪ ಗಾಯವಾಗಿದೆ. ಉಳಿದಂತೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಕೋವಿಡ್ ಕಳವಳದ ಕಾರಣ ಬಸ್ ನಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇರಲಿಲ್ಲ ಎನ್ನಲಾಗಿದೆ.

      ಸದ್ಯ ಬಸ್ ಮೇಲೆತ್ತುವ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap