ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್!!

ಬೆಂಗಳೂರು :

      ರಾಜ್ಯದ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಖಾಲಿ ಇರುವ ಮೂರು ಸ್ಥಾನಗಳ ಭರ್ತಿಗೆ ದೋಸ್ತಿ ನಾಯಕರು ತೀರ್ಮಾನ ಮಾಡಿದ್ದಾರೆ. 

      ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ರಾತ್ರಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು, ರಾಜ್ಯಪಾಲರು ಒಪ್ಪಿದರೆ ಸೋಮವಾರವೇ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಲಿದೆ. ಇಲ್ಲದಿದ್ದರೆ ಬುಧವಾರ ಹಾಗೂ ಗುರುವಾರದಂದು ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿದೆ.

      ಪಕ್ಷೇತರ ಶಾಸಕರಿಬ್ಬರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಖಾಲಿ ಇರುವ ಮೂರು ಸ್ಥಾನಗಳ ಪೈಕಿ ಒಂದು ಸ್ಥಾನ ಬಾಕಿ ಉಳಿಸಿಕೊಂಡು ಎರಡು ಸ್ಥಾನ ತುಂಬಲು ನಿರ್ಧಾರ ಮಾಡಲಾಗಿದ್ದು, ಪಕ್ಷೇತರ ಶಾಸಕ ಆರ್. ಶಂಕರ್, ಮುಳಬಾಗಿಲು ಶಾಸಕ ನಾಗೇಶ್ ಹಾಗೂ ಅತೃಪ್ತ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಸಂಪುಟ ಸೇರುವ ನಿರೀಕ್ಷೆಯಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap