ಕುಡಿಯುವ ನೀರಿನ ಸಮಸ್ಯೆಗಳಿಗೆ ಕಾಲ್ ಸೆಂಟರ್!!

ಬೆಂಗಳೂರು:

      ಕುಡಿಯುವ ನೀರಿನ ಸಮಸ್ಯೆಗಳ ಕುರಿತಂತೆ ಬರುವ ದೂರುಗಳಿಗೆ ತಕ್ಷಣವೇ ಸ್ಪಂದಿಸುವಂತೆ ಎಲ್ಲ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ.

      ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಪಟ್ಟ ಹಾಗೆ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕಾಲ್ ಸೆಂಟರ್ ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ, ಈ ದೂರುಗಳ ಬಗ್ಗೆ ತಕ್ಷಣವೇ ಸ್ಥಳೀಯ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

      ಕಾಲ್ ಸೆಂಟರ್ ವಿವರಗಳನ್ನು ಕೆಳಕಂಡಂತೆ ಒದಗಿಸಲಾಗಿದೆ ಈ ಕಾಲ್ಸೆಂಟರ್ಗಳ ದೂರವಾಣಿ ಸಂಖ್ಯೆಗಳನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ವೆಬ್ ಸೈಟ್ rdpr.kar.nic.in ಇದರಲ್ಲಿಯೂ ಸಹ ಪ್ರಕಟಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ .

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap