ರಾಯಚೂರು:
ಸಿಂಧನೂರು ತಾಲ್ಲೂಕಿನ ಮಣಿಕೇರಿ ಕ್ಯಾಂಪ್ ಹತ್ತಿರ ಕಾರು ಪಲ್ಟಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ಬೆಳಗ್ಗೆ ಜರುಗಿದೆ.
ಬೆಂಗಳೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಜರುಗಿದ್ದು, ಎಂಜಿನಿಯರ್ ಗೋಪಾಲ್ (29) ಹಾಗೂ ಕಾರು ಚಾಲಕ ಲಕ್ಷ್ಮಣ (33) ಮೃತಪಟ್ಟಿದ್ದಾರೆ.
ಇನ್ನು ಕಾರಿನಲ್ಲಿದ್ದ ಮೃತ ಗೋಪಾಲ್ ಪತ್ನಿ ಚಂದ್ರಿಕಾ, ಪಾರ್ವತಿ, ಶಿವರಾಜ್ ಗಂಭೀರ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ಕಳಿಸಿಕೊಡಲಾಗಿದೆ. ಲಾಕ್ ಡೌನ್ ಸಡಿಲಿಕೆ ಆಗಿರುವುದರಿಂದ ಇವರೆಲ್ಲರೂ ಬೆಂಗಳೂರಿನಿಂದ ರಾಯಚೂರಿಗೆ ಬರುತ್ತಿದ್ದರು ಎನ್ನಲಾಗಿದೆ.
ಈ ಸಂಬಂಧ ಬಳಗಾನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Accident-death.gif)