ಚಿಕ್ಕಮಗಳೂರು : ಹಳ್ಳಕ್ಕೆ ಬಿದ್ದ ಕಾರು ; ಬೆಂಗಳೂರಿನ 3 ಮಂದಿ ಸಾವು!!

ಚಿಕ್ಕಮಗಳೂರು:

     ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳದಲ್ಲು ಮಗುಚಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿ ನಡೆದಿದೆ.

     ಹೆಬ್ಬಾಳದ ಯಶೋಧ (81) ಪ್ರಕಾಶ್​(61) ಹಾಗೂ ಅನಿರುದ್ಧ್ (24)ಮೃತಪಟ್ಟ ದುರ್ದೈವಿಗಳು. ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಬಳಿ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಹೀಗಾಗಿ ರಸ್ತೆ ಪಕ್ಕದಲ್ಲಿನ ನೀರಿನ ಹಳ್ಳಕ್ಕೆ ಕಾರು ಉರುಳಿ ಬಿದ್ದಿದೆ. ಅದರಲ್ಲಿದ್ದ ಐವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

     ಇನ್ನು ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

     

Recent Articles

spot_img

Related Stories

Share via
Copy link
Powered by Social Snap