ದೆಹಲಿ:
ಕರ್ನಾಟಕದಲ್ಲಿ ಮಳೆ ಕೊರತೆಯಾದ ಬೆನ್ನಲ್ಲೇ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.
ದೆಹಲಿಯಲ್ಲಿ ನಡೆದ ಕಾವೇರಿ ಕೊಳ್ಳದ ರಾಜ್ಯಗಳ ಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿಂದೆ ಜೂನ್ ತಿಂಗಳ ಅಂತ್ಯದೊಳಗೆ 9.25 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಕೋರಿತ್ತು. ಎರಡೂ ರಾಜ್ಯಗಳ ವಾದಗಳನ್ನು ಪರಿಗಣಿಸಿ ಇದೀಗ ಪ್ರಾಧಿಕಾರ ತನ್ನ ನಿರ್ಧಾರವನ್ನು ತಿಳಿಸಿದ್ದು, ಕರ್ನಾಟಕ 9.19 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂಬ ತೀರ್ಪನ್ನು ನೀಡಿದೆ.
ಆದರೆ ನೀರಿನ ಪ್ರಮಾಣ ಕಡಿಮೆ ಇದೆ ಎಂದು ಕರ್ನಾಟಕ ವಾದ ಮಂಡಿಸಿದೆ. ಷರತ್ತಿನ ಮೇರೆಗೆ ನೀರು ಹರಿಸಲು ಪ್ರಾಧಿಕಾರ ಸೂಚಿಸಿದ್ದು, ನೀರಿನ ಒಳ ಹರಿವು ಪ್ರಮಾಣ ಹೆಚ್ಚಾದರೆ ಮಾತ್ರ ನೀರು ಬಿಡುವಂತೆ ತಿಳಿಸಿದೆ.
