ಬೆಂಗಳೂರು :
ಕೇಂದ್ರ ಸರ್ಕಾರದಿಂದ ರಾಜ್ಯದ ಬರ ಪರಿಹಾರಕ್ಕಾಗಿ ಕೊನೆಗೆ ಪರಿಹಾರದ ಹಣ ಬಿಡುಗಡೆಯಾಗಿದೆ.
ರಾಜ್ಯ ಸರ್ಕಾರ ಕೇಂದ್ರಕ್ಕೆ 2034 ಕೋಟಿಯನ್ನು ಬರಪರಿಹಾರಕ್ಕಾಗಿ ಕೇಳಿಕೊಂಡು ಮನವಿ ಮಾಡಿತ್ತು. ಆದರೇ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿದ್ದ ಉನ್ನತ ಮಟ್ಟದ ಸಮಿತಿ ಕೇಂದ್ರ ಸರ್ಕಾರದಿಂದ 1,029 ಕೋಟಿ ರೂಪಾಯಿಯನ್ನು ಇಂದು ಬಿಡಗಡೆ ಮಾಡಿದೆ.
A high-level committee, chaired by Union Home Minister Amit Shah, approves Rs 4432.10 Crore of additional central assistance to #Odisha, #Karnataka and #HimachalPradesh (file pic) pic.twitter.com/6IAwZ9dn6q
— ANI (@ANI) August 20, 2019
ಕರ್ನಾಟಕ, ಒಡಿಶಾ ಹಾಗೂ ಹಿಮಾಚಲ ಪ್ರದೇಶದಲ್ಲಿ ಉಂಟಾದ ನೈಸರ್ಗಿಕ ವಿಪತ್ತುಗಳಿಗೆ ಒಟ್ಟಾರೆ 4432.10 ಕೋಟಿ ರೂ. ನೆರವು ಘೋಷಣೆ ಮಾಡಿದೆ.
ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ನೆರೆ, ಪ್ರವಾಹ ಪರಿಸ್ಥಿತಿಯನ್ನು ಎದುರಿಸುವಂತಾಯಿತು. ಇಂತಹ ನೆರೆ, ಪ್ರವಾಹಕ್ಕಾಗಿ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿಕೊಂಡಿತ್ತು. ಕಳೆದ ಎರಡು ದಿನಗಳ ಹಿಂದೆ ನವದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇಂದ್ರದ ಸಚಿವರನ್ನು ಕೋರಿಕೊಂಡಿದ್ದರು.
ಈ ಮೂಲಕ ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ 1,029 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.
![](https://prajapragathi.com/wp-content/uploads/2019/08/drought-area-in-karnataka.gif)